25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

ನಾಳ: 40 ವರ್ಷ ಮೇಲ್ಪಟ್ಟ ವಯೋಮಾನದ ಹಿರಿಯ ಕ್ರೀಡಾಪಟುಗಳ ಶ್ರೀದುರ್ಗಾ ಕಪ್ ಕ್ರಿಕೆಟ್ ಪಂದ್ಯಾಟ ಮಾ.2ರಂದು ನಾಳ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ರಥಬೀದಿಯಲ್ಲಿ ನಡೆಯಿತು.

ನಾಳ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಅಸ್ರಣ್ಣ ದೀಪ ಪ್ರಜ್ವಲನೆಗೊಳಿಸುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು.

ಸಂಜೆ ನಡೆದು ಸಮಾರೋಪ ಸಮಾರಂಭದಲ್ಲಿ ಕಳಿಯ ಗ್ರಾ.ಪಂ. ಪ್ರಭಾರ ಪಿಡಿಒ ಕುಂಞ, ನಾಳ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಉಪನ್ಯಾಸಕ ಕೇಶವ ಬಂಗೇರ, ಹಿರಿಯ ಕ್ರೀಡಾಪಟುಗಳಾದ ತುಕರಾಮ್ ಪೂಜಾರಿ, ಸುರೇಶ್ ಕುಮಾರ್ ಆರ್.ಎನ್., ಪ್ರಶಸ್ತಿ ವಿತರಿಸಿದರು.

ಸುಂದರ ನಾಯ್ಕ್ ಕುಳಾಯಿ, ಶರತ್ ಕುಮಾರ್ ಕುಳಾಯಿ, ಸುಭಾಷಿಣಿ ಜನಾರ್ದನ ಗೌಡ ಕುಳಾಯಿ, ವಿಕ್ರಂ ವಂಜಾರೆ ಹಾಗೂ ಸಿದ್ದಪ್ಪ ಗೌಡ ಹಾಕೋಟೆ ಅವರು ಪಂದ್ಯಾಟವನ್ನು ಸಂಘಟಿಸಿದ್ದರು.

ಲೀಗ್ ಮಾದರಿಯಲ್ಲಿ ನಡೆದ ಈ ಕ್ರಿಕೆಟ್ ಪಂದ್ಯಾಟದಲ್ಲಿ ಆರು ತಂಡಗಳು ಭಾಗವಹಿಸಿದ್ದವು. ದುರ್ಗಾಪರಮೇಶ್ವರಿ ವಾರಿಯರ್ಸ್ ಎಸ್. ಆರ್ ತಂಡ ಪ್ರಥಮ ಸ್ಥಾನವನ್ನು, ಜ್ಯೋತಿ ಎಂಟರ್ ಪ್ರೈಸಸ್ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿತು. ಶ್ರೀ ದುರ್ಗಾ ವಾರಿಯರ್ಸ್ ನಾಳ ತೃತೀಯ ಸ್ಥಾನವನ್ನು, ಶುಭೋದಯ ಕುಳಾಯಿ ತಂಡವು ಚತುರ್ಥ ಸ್ಥಾನವನ್ನು ಪಡೆದುಕೊಂಡಿತು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಅಭ್ಯಾಸ್ ಪಿಯು ಕಾಲೇಜು ಹಾಗೂ ಪ್ರಸನ್ನ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ ರಾಣಿಯ ವರ್ಷಾಚರಣೆಯ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya
error: Content is protected !!