22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

ಶಿಶಿಲ: ಶಿಶಿಲ ಗ್ರಾಮದ ಉಮ್ಮಂತಿಮಾರ್ ನಲ್ಲಿ ರೂ.2.50 ಕೋಟಿ ವೆಚ್ಚದ ಕಿಂಡಿ ಅಣೆಕಟ್ಟು ನಿರ್ಮಾಣ ಹಾಗೂ ಒಟ್ಲ ಪ್ರದೇಶದಲ್ಲಿ ರೂ.40 ಲಕ್ಷ ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಮಾ.2ರಂದು ಶಿಲಾನ್ಯಾಸವು ಕಾರ್ಯಕ್ರಮ ನೆರವೇರಿತು.

ಶಾಸಕ ಹರೀಶ್ ಪೂಂಜ ಅವರು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ಜನರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಈ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕಿಂಡಿ ಅಣೆಕಟ್ಟು ನಿರ್ಮಾಣದಿಂದ ನೀರಿನ ಸಂರಕ್ಷಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ನೆರವಾಗಲಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.

ಒಟ್ಲ ಪ್ರದೇಶದ ಸೇತುವೆ ನಿರ್ಮಾಣದಿಂದ ಗ್ರಾಮಾಂತರ ಸಂಪರ್ಕ ವ್ಯವಸ್ಥೆ ಸುಧಾರಣೆ ಕಾಣಲಿದೆ ಶಿಬಾಜೆ ಗ್ರಾಮಕ್ಕೂ ಸಂಪರ್ಕಕ್ಕೆ ಅನುಕೂಲವಾಗಲಿದೆ. ಅದಲ್ಲದೆ ಶಿಶಿಲ ದೇವಸ್ಥಾನಕ್ಕೆ ಮತ್ತು ದೇವಸ ಭಾಗಕ್ಕೆ ಈ ಸೇತುವೆ ಮೂಲಕ ಸಂಪರ್ಕ ಕಲ್ಪಿಸಲಾಗುವುದು ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಸುಧೀನ್ ಡಿ, ಸಂದೀಪ್ ಅಮ್ಮುಡಂಗೆ, ಮಾಜಿ ಸದಸ್ಯರು, ಸ್ಥಳೀಯ ಮುಖಂಡರಾದ, ಕೊರಗಪ್ಪ ಗೌಡ, ಕರುಣಾಕರ ಶಿಶಿಲ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಚೇತನ ಚಂದ್ರಶೇಖರ, ಆನಂದ ಪೂಜಾರಿ, ರಾಧಾಕೃಷ್ಣ ಗುತ್ತು,ಸುಬ್ರಾಯ ಗೌಡ, ಕೆ ಜಿ ಗೋಖಲೆ, ಕುಶಾಲಪ್ಪ ಗೌಡ, ಗೋಪು ಗೋಖಲೆ, ರಮೇಶ್ ಒಟ್ಲ, ಸೀನಪ್ಪ, ಚೆನ್ನಪ್ಪ ಮಲೆಕುಡಿಯ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya

ದಿ| ಕಾಶಿ ಶೆಟ್ಟಿ ಸ್ಮರಣಾರ್ಥ ದೇವನಾರಿ ಬಂಗಾಡಿ ಸ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಯೂನಿಫಾರ್ಮ್ ವಿತರಣೆ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya

ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯ ಬಂಧನ

Suddi Udaya

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

Suddi Udaya
error: Content is protected !!