30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

ಶಿಶಿಲ: ಶಿಶಿಲ ಗ್ರಾಮದ ಉಮ್ಮಂತಿಮಾರ್ ನಲ್ಲಿ ರೂ.2.50 ಕೋಟಿ ವೆಚ್ಚದ ಕಿಂಡಿ ಅಣೆಕಟ್ಟು ನಿರ್ಮಾಣ ಹಾಗೂ ಒಟ್ಲ ಪ್ರದೇಶದಲ್ಲಿ ರೂ.40 ಲಕ್ಷ ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಮಾ.2ರಂದು ಶಿಲಾನ್ಯಾಸವು ಕಾರ್ಯಕ್ರಮ ನೆರವೇರಿತು.

ಶಾಸಕ ಹರೀಶ್ ಪೂಂಜ ಅವರು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ಜನರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಈ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕಿಂಡಿ ಅಣೆಕಟ್ಟು ನಿರ್ಮಾಣದಿಂದ ನೀರಿನ ಸಂರಕ್ಷಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ನೆರವಾಗಲಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.

ಒಟ್ಲ ಪ್ರದೇಶದ ಸೇತುವೆ ನಿರ್ಮಾಣದಿಂದ ಗ್ರಾಮಾಂತರ ಸಂಪರ್ಕ ವ್ಯವಸ್ಥೆ ಸುಧಾರಣೆ ಕಾಣಲಿದೆ ಶಿಬಾಜೆ ಗ್ರಾಮಕ್ಕೂ ಸಂಪರ್ಕಕ್ಕೆ ಅನುಕೂಲವಾಗಲಿದೆ. ಅದಲ್ಲದೆ ಶಿಶಿಲ ದೇವಸ್ಥಾನಕ್ಕೆ ಮತ್ತು ದೇವಸ ಭಾಗಕ್ಕೆ ಈ ಸೇತುವೆ ಮೂಲಕ ಸಂಪರ್ಕ ಕಲ್ಪಿಸಲಾಗುವುದು ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಸುಧೀನ್ ಡಿ, ಸಂದೀಪ್ ಅಮ್ಮುಡಂಗೆ, ಮಾಜಿ ಸದಸ್ಯರು, ಸ್ಥಳೀಯ ಮುಖಂಡರಾದ, ಕೊರಗಪ್ಪ ಗೌಡ, ಕರುಣಾಕರ ಶಿಶಿಲ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಚೇತನ ಚಂದ್ರಶೇಖರ, ಆನಂದ ಪೂಜಾರಿ, ರಾಧಾಕೃಷ್ಣ ಗುತ್ತು,ಸುಬ್ರಾಯ ಗೌಡ, ಕೆ ಜಿ ಗೋಖಲೆ, ಕುಶಾಲಪ್ಪ ಗೌಡ, ಗೋಪು ಗೋಖಲೆ, ರಮೇಶ್ ಒಟ್ಲ, ಸೀನಪ್ಪ, ಚೆನ್ನಪ್ಪ ಮಲೆಕುಡಿಯ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya

ಗಮಕ, ಯಕ್ಷಗಾನದಲ್ಲಿ ವಿಶೇಷ ಸಾಧನೆ: ಮಧೂರು ಮೋಹನ ಕಲ್ಲೂರಾಯರಿಗೆ ರಾಜ್ಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya
error: Content is protected !!