September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ ಮಹಾವಿದ್ಯಾಲಯ, ಉಜಿರೆ ಯ ಎಸ್ ಡಿಎಂ–ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ನೇಮಕಾತಿ ಕೇಂದ್ರದ ವತಿಯಿಂದ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರವು ಕಾಲೇಜಿನ ಸೆಮಿನಾರ್ ಹಾಲ್–I ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಅಂತರಾಷ್ಟ್ರೀಯ ಇಂಗ್ಲಿಷ್ ಉಚ್ಚಾರಣಾ ತರಬೇತುದಾರ ಹಾಗೂ ಡ್ಯಾಫೋಡಿಲ್ಸ್ ಟ್ರೈನಿಂಗ್ ಅಕಾಡೆಮಿ, ಬೆಂಗಳೂರಿನ ಸಂಸ್ಥಾಪಕ ಡಾ. ರಮೇಶ್ ಎ. ಉದ್ಘಾಟಿಸಿ ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಸಂವಹನ ಕೌಶಲ್ಯದ ಮಹತ್ವವನ್ನು ವಿವರಿಸಿದರು. ಆತ್ಮವಿಶ್ವಾಸ, ಸರಿಯಾದ ಉಚ್ಚಾರಣೆ ಹಾಗೂ ಸ್ಪಷ್ಟ ಅಭಿವ್ಯಕ್ತಿ ವಿದ್ಯಾರ್ಥಿಗಳ ಸಾಧನೆಗೆ ಅತ್ಯಂತ ಮುಖ್ಯವೆಂದು ತಿಳಿಸಿದರು

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಮಗ್ರ ಅರಿವು ಹೊಂದಿ, ಸಮರ್ಪಕ ಯೋಜನೆ ಹಾಗೂ ಮಾರ್ಗದರ್ಶನದೊಂದಿಗೆ ಸಿದ್ಧತೆ ನಡೆಸಬೇಕು ಎಂದು ಸಲಹೆ ನೀಡಿದರು. ಸರ್ಕಾರದ ವಿವಿಧ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಜೋಸೆಫ್ ಪಿ.ಎಸ್., ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ವಾರ್ಡನ್‌ಗಳಾದ ಲೋಕೇಶ್ ಹಾಗೂ ಚಂದ್ರಪ್ಪ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮೂರು ಶೈಕ್ಷಣಿಕ ಅಧಿವೇಶನಗಳು ನಡೆದವು. ಮೊದಲ ಅಧಿವೇಶನದಲ್ಲಿ ಡಾ. ರಮೇಶ್ ಎ. ಅವರು “ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸಿಗಾಗಿ ಸಂವಹನ ಕೌಶಲ್ಯಗಳು” ವಿಷಯದ ಮೇಲೆ ಉಪನ್ಯಾಸ ನೀಡಿದರು. ಎರಡನೇ ಅಧಿವೇಶನದಲ್ಲಿ ಜೆಸಿಐ ಇಂಡಿಯಾ ರಾಷ್ಟ್ರೀಯ ತರಬೇತುದಾರ ಹಾಗೂ ರಾಮಕುಂಜ ಹೈಸ್ಕೂಲ್, ಬಿಲಿನೆಲೆ ಮುಖ್ಯೋಪಾಧ್ಯಾಯ ಶತೀಶ್ ಭಟ್ ಬಿಲಿನೆಲೆ ಅವರು “ಪರೀಕ್ಷಾ ಒತ್ತಡ ಮತ್ತು ಆತಂಕವನ್ನು ನಿರ್ವಹಿಸುವ ತಂತ್ರಗಳು” ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಮೂರನೇ ಅಧಿವೇಶನದಲ್ಲಿ ಮಂಗಳೂರು ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜು ಹಂಪನಕಟ್ಟೆ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಶೋಕ್ ರಾಕೇಶ್ ಡಿ’ಸೋಜಾ ಅವರು “ಸ್ಪರ್ಧಾತ್ಮಕ ಪರೀಕ್ಷೆಗಳ ಅರಿವು ಮತ್ತು ತಯಾರಿ ತಂತ್ರಗಳು” ವಿಷಯವಾಗಿ ಉಪನ್ಯಾಸ ನೀಡಿದರು.


ಕಾರ್ಯಕ್ರಮ ಸಂಯೋಜಕ ಎಸ್‌ಡಿಎಂ ಕಾಲೇಜಿನ ತರಬೇತಿ ಮತ್ತು ನೇಮಕಾತಿ ಅಧಿಕಾರಿ ಡಾ. ನಾಗರಾಜ್ ಪೂಜಾರಿ ಸ್ವಾಗತಿಸಿದರು. ನಿಲಯ ಪಾಲಕ ಪಾಲಕ ಚಂದ್ರಪ್ಪ ವಂದಿಸಿದರು. ಉಪನ್ಯಾಸಕ ದೀಕ್ಷಿತ್ ರೈ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಉಪಯುಕ್ತ ಮಾಹಿತಿಯನ್ನು ಪಡೆದುಕೊಂಡರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya

ಎಸ್.ಡಿ.ಎಂ. ರಸಾಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ: ಅನ್ವಯಿಕ ಪ್ರಯೋಗಗಳಿಂದ ಸುಸ್ಥಿರ ಬೆಳವಣಿಗೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya
error: Content is protected !!