22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

ನಾಳ: 40 ವರ್ಷ ಮೇಲ್ಪಟ್ಟ ವಯೋಮಾನದ ಹಿರಿಯ ಕ್ರೀಡಾಪಟುಗಳ ಶ್ರೀದುರ್ಗಾ ಕಪ್ ಕ್ರಿಕೆಟ್ ಪಂದ್ಯಾಟ ಮಾ.2ರಂದು ನಾಳ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ರಥಬೀದಿಯಲ್ಲಿ ನಡೆಯಿತು.

ನಾಳ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಅಸ್ರಣ್ಣ ದೀಪ ಪ್ರಜ್ವಲನೆಗೊಳಿಸುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು.

ಸಂಜೆ ನಡೆದು ಸಮಾರೋಪ ಸಮಾರಂಭದಲ್ಲಿ ಕಳಿಯ ಗ್ರಾ.ಪಂ. ಪ್ರಭಾರ ಪಿಡಿಒ ಕುಂಞ, ನಾಳ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಉಪನ್ಯಾಸಕ ಕೇಶವ ಬಂಗೇರ, ಹಿರಿಯ ಕ್ರೀಡಾಪಟುಗಳಾದ ತುಕರಾಮ್ ಪೂಜಾರಿ, ಸುರೇಶ್ ಕುಮಾರ್ ಆರ್.ಎನ್., ಪ್ರಶಸ್ತಿ ವಿತರಿಸಿದರು.

ಸುಂದರ ನಾಯ್ಕ್ ಕುಳಾಯಿ, ಶರತ್ ಕುಮಾರ್ ಕುಳಾಯಿ, ಸುಭಾಷಿಣಿ ಜನಾರ್ದನ ಗೌಡ ಕುಳಾಯಿ, ವಿಕ್ರಂ ವಂಜಾರೆ ಹಾಗೂ ಸಿದ್ದಪ್ಪ ಗೌಡ ಹಾಕೋಟೆ ಅವರು ಪಂದ್ಯಾಟವನ್ನು ಸಂಘಟಿಸಿದ್ದರು.

ಲೀಗ್ ಮಾದರಿಯಲ್ಲಿ ನಡೆದ ಈ ಕ್ರಿಕೆಟ್ ಪಂದ್ಯಾಟದಲ್ಲಿ ಆರು ತಂಡಗಳು ಭಾಗವಹಿಸಿದ್ದವು. ದುರ್ಗಾಪರಮೇಶ್ವರಿ ವಾರಿಯರ್ಸ್ ಎಸ್. ಆರ್ ತಂಡ ಪ್ರಥಮ ಸ್ಥಾನವನ್ನು, ಜ್ಯೋತಿ ಎಂಟರ್ ಪ್ರೈಸಸ್ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿತು. ಶ್ರೀ ದುರ್ಗಾ ವಾರಿಯರ್ಸ್ ನಾಳ ತೃತೀಯ ಸ್ಥಾನವನ್ನು, ಶುಭೋದಯ ಕುಳಾಯಿ ತಂಡವು ಚತುರ್ಥ ಸ್ಥಾನವನ್ನು ಪಡೆದುಕೊಂಡಿತು.

Related posts

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya

ಕುಕ್ಕುಟೋದ್ಯಮದ ಸಮಸ್ಯೆಗಳ ಕುರಿತು ಬೆಂಗಳೂರಿನಲ್ಲಿ ಸಭೆ – ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಬಲವಾದ ಪ್ರತಿಪಾದನೆ

Suddi Udaya
error: Content is protected !!