22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

ನಾಳ: 40 ವರ್ಷ ಮೇಲ್ಪಟ್ಟ ವಯೋಮಾನದ ಹಿರಿಯ ಕ್ರೀಡಾಪಟುಗಳ ಶ್ರೀದುರ್ಗಾ ಕಪ್ ಕ್ರಿಕೆಟ್ ಪಂದ್ಯಾಟ ಮಾ.2ರಂದು ನಾಳ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ರಥಬೀದಿಯಲ್ಲಿ ನಡೆಯಿತು.

ನಾಳ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಅಸ್ರಣ್ಣ ದೀಪ ಪ್ರಜ್ವಲನೆಗೊಳಿಸುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು.

ಸಂಜೆ ನಡೆದು ಸಮಾರೋಪ ಸಮಾರಂಭದಲ್ಲಿ ಕಳಿಯ ಗ್ರಾ.ಪಂ. ಪ್ರಭಾರ ಪಿಡಿಒ ಕುಂಞ, ನಾಳ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಉಪನ್ಯಾಸಕ ಕೇಶವ ಬಂಗೇರ, ಹಿರಿಯ ಕ್ರೀಡಾಪಟುಗಳಾದ ತುಕರಾಮ್ ಪೂಜಾರಿ, ಸುರೇಶ್ ಕುಮಾರ್ ಆರ್.ಎನ್., ಪ್ರಶಸ್ತಿ ವಿತರಿಸಿದರು.

ಸುಂದರ ನಾಯ್ಕ್ ಕುಳಾಯಿ, ಶರತ್ ಕುಮಾರ್ ಕುಳಾಯಿ, ಸುಭಾಷಿಣಿ ಜನಾರ್ದನ ಗೌಡ ಕುಳಾಯಿ, ವಿಕ್ರಂ ವಂಜಾರೆ ಹಾಗೂ ಸಿದ್ದಪ್ಪ ಗೌಡ ಹಾಕೋಟೆ ಅವರು ಪಂದ್ಯಾಟವನ್ನು ಸಂಘಟಿಸಿದ್ದರು.

ಲೀಗ್ ಮಾದರಿಯಲ್ಲಿ ನಡೆದ ಈ ಕ್ರಿಕೆಟ್ ಪಂದ್ಯಾಟದಲ್ಲಿ ಆರು ತಂಡಗಳು ಭಾಗವಹಿಸಿದ್ದವು. ದುರ್ಗಾಪರಮೇಶ್ವರಿ ವಾರಿಯರ್ಸ್ ಎಸ್. ಆರ್ ತಂಡ ಪ್ರಥಮ ಸ್ಥಾನವನ್ನು, ಜ್ಯೋತಿ ಎಂಟರ್ ಪ್ರೈಸಸ್ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿತು. ಶ್ರೀ ದುರ್ಗಾ ವಾರಿಯರ್ಸ್ ನಾಳ ತೃತೀಯ ಸ್ಥಾನವನ್ನು, ಶುಭೋದಯ ಕುಳಾಯಿ ತಂಡವು ಚತುರ್ಥ ಸ್ಥಾನವನ್ನು ಪಡೆದುಕೊಂಡಿತು.

Related posts

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ನಾಳೆ(ಜೂ.11): ವಿದ್ಯುತ್ ನಿಲುಗಡೆ

Suddi Udaya

ಬದನಾಜೆ ಶಾಲೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಉಜಿರೆ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ “ಯಶೋ-ವಿಜಯ” ಬದುಕು-ನೆನಪು-ಸ್ಮರಣೆ: ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ದಿ. ಕಾಶಿ ಶೆಟ್ಟಿಯವರ ಸ್ಮರಣಾರ್ಥ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya
error: Content is protected !!