September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

ನಾಳ: 40 ವರ್ಷ ಮೇಲ್ಪಟ್ಟ ವಯೋಮಾನದ ಹಿರಿಯ ಕ್ರೀಡಾಪಟುಗಳ ಶ್ರೀದುರ್ಗಾ ಕಪ್ ಕ್ರಿಕೆಟ್ ಪಂದ್ಯಾಟ ಮಾ.2ರಂದು ನಾಳ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ರಥಬೀದಿಯಲ್ಲಿ ನಡೆಯಿತು.

ನಾಳ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಅಸ್ರಣ್ಣ ದೀಪ ಪ್ರಜ್ವಲನೆಗೊಳಿಸುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು.

ಸಂಜೆ ನಡೆದು ಸಮಾರೋಪ ಸಮಾರಂಭದಲ್ಲಿ ಕಳಿಯ ಗ್ರಾ.ಪಂ. ಪ್ರಭಾರ ಪಿಡಿಒ ಕುಂಞ, ನಾಳ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಉಪನ್ಯಾಸಕ ಕೇಶವ ಬಂಗೇರ, ಹಿರಿಯ ಕ್ರೀಡಾಪಟುಗಳಾದ ತುಕರಾಮ್ ಪೂಜಾರಿ, ಸುರೇಶ್ ಕುಮಾರ್ ಆರ್.ಎನ್., ಪ್ರಶಸ್ತಿ ವಿತರಿಸಿದರು.

ಸುಂದರ ನಾಯ್ಕ್ ಕುಳಾಯಿ, ಶರತ್ ಕುಮಾರ್ ಕುಳಾಯಿ, ಸುಭಾಷಿಣಿ ಜನಾರ್ದನ ಗೌಡ ಕುಳಾಯಿ, ವಿಕ್ರಂ ವಂಜಾರೆ ಹಾಗೂ ಸಿದ್ದಪ್ಪ ಗೌಡ ಹಾಕೋಟೆ ಅವರು ಪಂದ್ಯಾಟವನ್ನು ಸಂಘಟಿಸಿದ್ದರು.

ಲೀಗ್ ಮಾದರಿಯಲ್ಲಿ ನಡೆದ ಈ ಕ್ರಿಕೆಟ್ ಪಂದ್ಯಾಟದಲ್ಲಿ ಆರು ತಂಡಗಳು ಭಾಗವಹಿಸಿದ್ದವು. ದುರ್ಗಾಪರಮೇಶ್ವರಿ ವಾರಿಯರ್ಸ್ ಎಸ್. ಆರ್ ತಂಡ ಪ್ರಥಮ ಸ್ಥಾನವನ್ನು, ಜ್ಯೋತಿ ಎಂಟರ್ ಪ್ರೈಸಸ್ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿತು. ಶ್ರೀ ದುರ್ಗಾ ವಾರಿಯರ್ಸ್ ನಾಳ ತೃತೀಯ ಸ್ಥಾನವನ್ನು, ಶುಭೋದಯ ಕುಳಾಯಿ ತಂಡವು ಚತುರ್ಥ ಸ್ಥಾನವನ್ನು ಪಡೆದುಕೊಂಡಿತು.

Related posts

ಬಜೆಟ್ ನಿಂದ ಭಾರತದ ವರ್ಚಸ್ಸು ವಿಶ್ವ ಮಟ್ಟದಲ್ಲಿ ಹೆಚ್ಚಿಸಿದೆ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ವಿಜೃಂಭಣೆಯ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ರೆಖ್ಯ ಗ್ರಾಮದ ಸರ್ವೆ ನಂ:69/1 ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ನಡೆಸಿದ ಜಂಟಿ ಸರ್ವೆ ಪೂರ್ಣ: ಸೂಕ್ತ ಆದೇಶ ನೀಡುವಂತೆ ಶಾಸಕ ಹರೀಶ್ ಪೂಂಜರಿಂದ ಸಚಿವ ಈಶ್ವರ ಖಂಡ್ರೆರವರಿಗೆ ಮನವಿ

Suddi Udaya
error: Content is protected !!