25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶವು ಮಾ.1ರಂದು ಬದ್ಯಾರ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ವಲಯ ಮಟ್ಟದ ಧರ್ಮಗುರುಗಳಾದ ವಂ.ಫಾ.ವಾಲ್ಟರ್ ಡಿಮೆಲ್ಲೊ, ಬೆಳ್ತಂಗಡಿ ವಲಯದ ನಿರ್ದೇಶಕ ವಂ.ಫಾ.ಆಬೆಲ್ ಲೋಬೊ, ಬದ್ಯಾರ್ ಚರ್ಚಿನ ಧರ್ಮಗುರು ವಂ.ಫಾ. ರೋಶನ್ ಕ್ರಾಸ್ತಾ, ವಲಯ ಅಧ್ಯಕ್ಷೆ ಗ್ರೇಸಿ ಲೋಬೊ, ವಲಯ ಕಾರ್ಯದರ್ಶಿ ಲೀನಾ ಕ್ರಾಸ್ತ , ಬದ್ಯಾರ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ, ಕಾರ್ಯದರ್ಶಿ, ಸಂಯೋಜಕರು, ಕೇಂದ್ರೀಯ ಸಮಿತಿ ಉಪಾಧ್ಯಕ್ಷೆ ಲಿನೆಟ್ ಕ್ಯಾಸ್ಟೆಲಿನೊ, ಕಾರ್ಯದರ್ಶಿ ವಾಯ್ಲೆಟ್ ಪಿರೇರಾ, ಬದ್ಯಾರ್ ಮಹಿಳಾ ಘಟಕದ ಅಧ್ಯಕ್ಷೆ ರೈನಾ ಲೋಬೊ, ಬದ್ಯಾರ್ ಚರ್ಚಿನ ಧರ್ಮ ಭಗಿನಿ ಸಿ.ಜಾನೆಟ್ ರೇಗೊ ಉಪಸ್ಥಿತರಿದ್ದರು.

12 ಚರ್ಚ್ ಘಟಕದ 550 ಮಹಿಳೆಯರು ಭಾಗ ವಹಿಸಿದ್ದರು.ಕಾರ್ಯದರ್ಶಿ ಲೀನಾ ಕ್ರಾಸ್ತಾ ಅಳದಂಗಡಿ ಇವರು ವಾರ್ಷಿಕ ವರದಿ ವಾಚಿಸಿದರು. ಹೂಗುಚ್ಚ ತಯಾರಿಕೆ ಸ್ಪರ್ಧೆ ಏರ್ಪಡಿಸಲಾಗಿತ್ತು.

12 ಘಟಕದವರಿಂದ ಸಾಂಸ್ಕ್ರತಿಕ ಕಾರ್ಯಕ್ರಮವನ್ನು ನಡೆಯಿತು. ಬೆಳ್ತಂಗಡಿ ವಲಯ ಸಂಘಟನೆಯು ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ ಇದರ ಲಾಂಛನವನ್ನು ಬಿಡುಗಡೆ ಮಾಡಿ ಉದ್ಘಾಟಿಸಲಾಯಿತು.

ವಲಯ ಅಧ್ಯಕ್ಷೆ ಗ್ರೇಸಿ ಲೋಬೊ ಬೆಳ್ತಂಗಡಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸೆಲಿನ್ ಕ್ರಾಸ್ತ ಅಳದಂಗಡಿ ಮತ್ತು ಸುನೀತಾ ಫೆರ್ನಾಂಡಿಸ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ವಲಯಉಪಾಧ್ಯಕ್ಷೆ ವೀಣಾ ಫೆರ್ನಾಂಡಿಸ್ ಉಜಿರೆ ವಂದಿಸಿದರು

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

Suddi Udaya

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!