ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

ಬೆಳ್ತಂಗಡಿ : ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ಸಭೆ ನಡೆಸಿ ತನಿಖೆ ಆರಂಭಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಶಿಬಾಜೆ ಸಾರ ಫಾರ್ಮ್ ಗುತ್ತು ಮನೆ ಎಂಬಲ್ಲಿ ತೋಟದಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಶ್ರೀಧರ (30) ಎಂಬಾತನನ್ನು 17-12-2022 ರಂದು ಹಲ್ಲೆ ನಡೆಸಿ ಬಳಿಕ 18-12-2022 ರಂದು ಕೊಲೆ ಮಾಡಿ ತೋಟದಲ್ಲಿ ಬೆತ್ತಲೆಗೊಳಿಸಿ ಹಾಕಿದ್ದರು ಎಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಿ ನಾಲ್ಕು ಜನ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿದ್ದರು.

ಈ ಪ್ರಕರಣ ಸಂಬಂಧ ತನಿಖೆ ಸರಿಯಾಗಿ ನಡೆಸಿಲ್ಲ ಎಂದು ಸಿಐಡಿ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಮತ್ತೆ ತನಿಖೆ ಸರಿಯಾಗಿಲ್ಲ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದ ದಲಿತ ಸಂಘಟನೆ ಹೋರಾಟಗಾರರು ವಿಶೇಷ ತನಿಖಾ ದಳದಿಂದ ರಚಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದರು ಅದರಂತೆ ಫೆ.20 ರಂದು ಕರ್ನಾಟಕ ಸರಕಾರ ಹೈಕೋರ್ಟ್ ಸೂಚನೆಯಂತೆ ಎಸ್.ಐ.ಟಿ ರಚಿಸಿ ಆದೇಶ ಮಾಡಿದ್ದರು.

ಶ್ರೀಧರ ಕೊಲೆ ಪ್ರಕರಣದ ಎಸ್‌.ಐ.ಟಿ ತನಿಖಾಧಿಕಾರಿಯಾಗಿರುವ ಡಿವೈಎಸ್ಪಿ ಹರೀಶ್.ಎಂ.ಆರ್, ಇನ್ಸ್‌ಪೆಕ್ಟರ್ ಡಾ.ನವೀನ್ ಕುಮಾರ್ ,ಸಬ್ ಇನ್ಸ್‌ಪೆಕ್ಟರ್ ಪುನೀತ್ ನೇತೃತ್ವದ ಸುಮಾರು 10 ಮಂದಿಯ ತಂಡ ಮಾ.2 ರಂದು ಬೆಳಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಬೆಂಗಳೂರು ಸಿಐಡಿ ಕಚೇರಿಯಲ್ಲಿದ್ದ ಶ್ರೀಧರ ಕೊಲೆ ಪ್ರಕರಣದ ದಾಖಲೆಗಳನ್ನು ಸಂಗ್ರಹಿಸಿ ಮೊದಲ ಹಂತದ ಸಭೆ ನಡೆಸಿ ಪ್ರಕರಣದ ತನಿಖೆ ಆರಂಭಿಸಿದ್ದಾರೆ.

Related posts

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಆಹ್ವಾನ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಬಗ್ಗೆ ಕಣಿಯೂರುನಲ್ಲಿ ಪೂರ್ವಭಾವಿ ಸಭೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya
error: Content is protected !!