23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

ಬೆಳ್ತಂಗಡಿ : ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ಸಭೆ ನಡೆಸಿ ತನಿಖೆ ಆರಂಭಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಶಿಬಾಜೆ ಸಾರ ಫಾರ್ಮ್ ಗುತ್ತು ಮನೆ ಎಂಬಲ್ಲಿ ತೋಟದಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಶ್ರೀಧರ (30) ಎಂಬಾತನನ್ನು 17-12-2022 ರಂದು ಹಲ್ಲೆ ನಡೆಸಿ ಬಳಿಕ 18-12-2022 ರಂದು ಕೊಲೆ ಮಾಡಿ ತೋಟದಲ್ಲಿ ಬೆತ್ತಲೆಗೊಳಿಸಿ ಹಾಕಿದ್ದರು ಎಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಿ ನಾಲ್ಕು ಜನ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿದ್ದರು.

ಈ ಪ್ರಕರಣ ಸಂಬಂಧ ತನಿಖೆ ಸರಿಯಾಗಿ ನಡೆಸಿಲ್ಲ ಎಂದು ಸಿಐಡಿ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಮತ್ತೆ ತನಿಖೆ ಸರಿಯಾಗಿಲ್ಲ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದ ದಲಿತ ಸಂಘಟನೆ ಹೋರಾಟಗಾರರು ವಿಶೇಷ ತನಿಖಾ ದಳದಿಂದ ರಚಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದರು ಅದರಂತೆ ಫೆ.20 ರಂದು ಕರ್ನಾಟಕ ಸರಕಾರ ಹೈಕೋರ್ಟ್ ಸೂಚನೆಯಂತೆ ಎಸ್.ಐ.ಟಿ ರಚಿಸಿ ಆದೇಶ ಮಾಡಿದ್ದರು.

ಶ್ರೀಧರ ಕೊಲೆ ಪ್ರಕರಣದ ಎಸ್‌.ಐ.ಟಿ ತನಿಖಾಧಿಕಾರಿಯಾಗಿರುವ ಡಿವೈಎಸ್ಪಿ ಹರೀಶ್.ಎಂ.ಆರ್, ಇನ್ಸ್‌ಪೆಕ್ಟರ್ ಡಾ.ನವೀನ್ ಕುಮಾರ್ ,ಸಬ್ ಇನ್ಸ್‌ಪೆಕ್ಟರ್ ಪುನೀತ್ ನೇತೃತ್ವದ ಸುಮಾರು 10 ಮಂದಿಯ ತಂಡ ಮಾ.2 ರಂದು ಬೆಳಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಬೆಂಗಳೂರು ಸಿಐಡಿ ಕಚೇರಿಯಲ್ಲಿದ್ದ ಶ್ರೀಧರ ಕೊಲೆ ಪ್ರಕರಣದ ದಾಖಲೆಗಳನ್ನು ಸಂಗ್ರಹಿಸಿ ಮೊದಲ ಹಂತದ ಸಭೆ ನಡೆಸಿ ಪ್ರಕರಣದ ತನಿಖೆ ಆರಂಭಿಸಿದ್ದಾರೆ.

Related posts

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya
error: Content is protected !!