September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

ಶಿಶಿಲ: ಶಿಶಿಲ ಗ್ರಾಮದ ಉಮ್ಮಂತಿಮಾರ್ ನಲ್ಲಿ ರೂ.2.50 ಕೋಟಿ ವೆಚ್ಚದ ಕಿಂಡಿ ಅಣೆಕಟ್ಟು ನಿರ್ಮಾಣ ಹಾಗೂ ಒಟ್ಲ ಪ್ರದೇಶದಲ್ಲಿ ರೂ.40 ಲಕ್ಷ ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಮಾ.2ರಂದು ಶಿಲಾನ್ಯಾಸವು ಕಾರ್ಯಕ್ರಮ ನೆರವೇರಿತು.

ಶಾಸಕ ಹರೀಶ್ ಪೂಂಜ ಅವರು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ಜನರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಈ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕಿಂಡಿ ಅಣೆಕಟ್ಟು ನಿರ್ಮಾಣದಿಂದ ನೀರಿನ ಸಂರಕ್ಷಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ನೆರವಾಗಲಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.

ಒಟ್ಲ ಪ್ರದೇಶದ ಸೇತುವೆ ನಿರ್ಮಾಣದಿಂದ ಗ್ರಾಮಾಂತರ ಸಂಪರ್ಕ ವ್ಯವಸ್ಥೆ ಸುಧಾರಣೆ ಕಾಣಲಿದೆ ಶಿಬಾಜೆ ಗ್ರಾಮಕ್ಕೂ ಸಂಪರ್ಕಕ್ಕೆ ಅನುಕೂಲವಾಗಲಿದೆ. ಅದಲ್ಲದೆ ಶಿಶಿಲ ದೇವಸ್ಥಾನಕ್ಕೆ ಮತ್ತು ದೇವಸ ಭಾಗಕ್ಕೆ ಈ ಸೇತುವೆ ಮೂಲಕ ಸಂಪರ್ಕ ಕಲ್ಪಿಸಲಾಗುವುದು ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಸುಧೀನ್ ಡಿ, ಸಂದೀಪ್ ಅಮ್ಮುಡಂಗೆ, ಮಾಜಿ ಸದಸ್ಯರು, ಸ್ಥಳೀಯ ಮುಖಂಡರಾದ, ಕೊರಗಪ್ಪ ಗೌಡ, ಕರುಣಾಕರ ಶಿಶಿಲ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಚೇತನ ಚಂದ್ರಶೇಖರ, ಆನಂದ ಪೂಜಾರಿ, ರಾಧಾಕೃಷ್ಣ ಗುತ್ತು,ಸುಬ್ರಾಯ ಗೌಡ, ಕೆ ಜಿ ಗೋಖಲೆ, ಕುಶಾಲಪ್ಪ ಗೌಡ, ಗೋಪು ಗೋಖಲೆ, ರಮೇಶ್ ಒಟ್ಲ, ಸೀನಪ್ಪ, ಚೆನ್ನಪ್ಪ ಮಲೆಕುಡಿಯ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya
error: Content is protected !!