22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಭಾರತ್ ಬ್ಯಾಂಕ್‌ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ

ಬೆಳ್ತಂಗಡಿ: ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಹು-ರಾಜ್ಯ ಪ್ರತಿಷ್ಠಿತ ಭಾರತ್ ಕೋ ಆಪರೇಟಿವ್ ಬ್ಯಾಂಕ್ (ಮುಂಬೈ) ಬೆಳ್ತಂಗಡಿ ಮುಖ್ಯರಸ್ತೆಯ ಭಾರತ್ ಪೆಟ್ರೋಲ್ ಪಂಪ್ ಬಳಿ ಇರುವ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣಕ್ಕೆ ಸ್ಥಳಾಂತರಗೊಂಡು ಮಾ.2ರಂದು ಶುಭಾರಂಭಗೊಂಡಿತು.

1008 ಮಹಾಮಂಡಲೇಶ್ವರ, ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭಾರತ್ ಬ್ಯಾಂಕಿನ ಬೆಳ್ತಂಗಡಿ ಕಛೇರಿಯನ್ನು ಉದ್ಘಾಟಿಸಿ ಶುಭ ಆಶೀರ್ವಾದ ನೀಡಿದರು.

ಅಧ್ಯಕ್ಷತೆಯನ್ನು ಭಾರತ್ ಬ್ಯಾಂಕ್‌ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ವಹಿಸಿ ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಿದ ಗ್ರಾಹಕ ಬಂಧುಗಳಿಗೆ ಕೃತಜ್ಞತೆ ಅರ್ಪಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್‌ ಪೂಂಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ, ಬ್ಯಾಂಕ್‌ನ ಉಪಾಧ್ಯಕ್ಷ ಸೋಮನಾಥ್ ಬಿ. ಅಮೀನ್ , ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಭಗೀರಥ ಜಿ., ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಬಿ., ವಿಶೇಷಾಧಿಕಾರಿ ಮೋನಪ್ಪ ಪೂಜಾರಿ, ನಿವೃತ್ತ ಎಸ್‌. ಪಿ. ಪೀತಾಂಬರ ಹೇರಾಜೆ, ಪೆರಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸತೀಶ್‌ ಕೆ. ಕಾಶಿಪಟ್ಣ, ಧಾರ್ಮಿಕ ಪರಿಷತ್‌ ಸದಸ್ಯ ಯೋಗೀಶ್‌ ಕುಮಾರ್‌ ನಡಕ್ಕರ, ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರು, ಭಾಜಪ ಜಿಲ್ಲಾ ಉಪಾಧ್ಯಕ್ಷ ಜಯಂತ್‌ ಕೋಟ್ಯಾನ್,ಡಾ.ಜಗನ್ನಾಥ್,ಪ್ರಮುಖರಾದ ರವಿ ಪೂಜಾರಿ ಆರ್ಲ,ತುಕರಾಮ್,ಭಾರತ್ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ವಿದ್ಯಾನಂದ್ ಎಸ್. ಕರ್ಕೇರಾ, ಶಾಖೆಯ ಮುಖ್ಯಸ್ಥ ದೀಪಕ್ ಡಿ. ಪೂಜಾರಿ, ನಿರ್ದೇಶಕರುಗಳಾದ ಭಾಸ್ಕರ್ ಎಂ. ಸಾಲಿಯಾನ್, ಗಂಗಾಧರ ಜೆ. ಪೂಜಾರಿ, ಚಂದ್ರಶೇಖರ ಎಸ್. ಪೂಜಾರಿ, ಅಶೋಕ್ ಎಂ. ಕೋಟ್ಯಾನ್, ಮೋಹನ್ ದಾಸ್ ಜಿ ಪೂಜಾರಿ, ನರೇಶ್ ಕೆ ಪೂಜಾರಿ, ನಿರಂಜನ್ ಎಲ್ ಪೂಜಾರಿ, ಸಂತೋಷ್ ಕೆ ಪೂಜಾರಿ, ದಯಾನಂದ ಆರ್ ಪೂಜಾರಿ, ಗಣೇಶ್ ಡಿ ಪೂಜಾರಿ, ಹರೀಶ್ ವಿ ಪೂಜಾರಿ, ನಾರಾಯಣ್ ಎಲ್ ಸುವರ್ಣ, ಸುರೇಶ್ ಬಿ ಸುವರ್ಣ, ಆಶಾ ಆರ್ ಬಂಗೇರ, ಜಯಲಕ್ಷ್ಮೀ ಪಿ. ಸಾಲಿಯಾನ್, ಅನ್ಬಳಗನ್ ಸಿ., ಗೌರೇಶ್ ಆರ್. ಕೋಟ್ಯಾನ್, ಜಯಶ್ರೀ ಎಂ. ಹೆಜಮಾಡಿ ಉಪಸ್ಥಿತರಿದ್ದರು.

Related posts

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಮ್ಯಾನೇಜ್ಮೆಂಟ್ ಪೇಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

Suddi Udaya
error: Content is protected !!