ಕಲ್ಮಂಜ: ಕನ್ಯಾಡಿ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಅಧೀನದಲ್ಲಿರುವ ಪುರಾತನ ದೇವಾಲಯ ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಮಾ.8ರಂದು ಧರ್ಮಸ್ಥಳ ವೇದಮೂರ್ತಿ ವಿಷ್ಣುಮೂರ್ತಿ ಹೆಬ್ಬಾರ್ ಮಂಡ್ರಪ್ಪಾಡಿ ಮತ್ತು ಕಲ್ಮಂಜ ಗ್ರಾಮದ ಅಂತರಬೈಲು ಅನಂತೇಶ್ ಚಡಗ ಇವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ರುದ್ರ ಪಾರಾಯಣ ,ಶತರುದ್ರ ಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆಯು ದೇವಲಿಂಗೇಶ್ವರ ಭಕ್ತ ಮಂಡಳಿ ಮತ್ತು ದೇಸಿ ಕೇಂದ್ರ ಧಾರ್ಮಿಕ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಪ್ರಕಾಶ್ ರವರ ಸಂಯೋಜಕತ್ವದಲ್ಲಿ ಮತ್ತು ಊರವರ ಸಹಕಾರದೊಂದಿಗೆ ನಡೆಯಲಿರುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸ್ವಾಮೀಜಿಯವರ ಸಮ್ಮುಖದೊಂದಿಗೆ ದೇವಲಿಂಗೇಶ್ವರ ಭಕ್ತ ಮಂಡಳಿಯ ಪದಾಧಿಕಾರಿಗಳು ಮತ್ತು ಊರ ಭಕ್ತರಿಂದ ಬಿಡುಗಡೆಗೊಳಿಸಲಾಯಿತು.






