ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

ಬೆಳ್ತಂಗಡಿ : ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ಸಭೆ ನಡೆಸಿ ತನಿಖೆ ಆರಂಭಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಶಿಬಾಜೆ ಸಾರ ಫಾರ್ಮ್ ಗುತ್ತು ಮನೆ ಎಂಬಲ್ಲಿ ತೋಟದಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಶ್ರೀಧರ (30) ಎಂಬಾತನನ್ನು 17-12-2022 ರಂದು ಹಲ್ಲೆ ನಡೆಸಿ ಬಳಿಕ 18-12-2022 ರಂದು ಕೊಲೆ ಮಾಡಿ ತೋಟದಲ್ಲಿ ಬೆತ್ತಲೆಗೊಳಿಸಿ ಹಾಕಿದ್ದರು ಎಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಿ ನಾಲ್ಕು ಜನ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿದ್ದರು.

ಈ ಪ್ರಕರಣ ಸಂಬಂಧ ತನಿಖೆ ಸರಿಯಾಗಿ ನಡೆಸಿಲ್ಲ ಎಂದು ಸಿಐಡಿ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಮತ್ತೆ ತನಿಖೆ ಸರಿಯಾಗಿಲ್ಲ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದ ದಲಿತ ಸಂಘಟನೆ ಹೋರಾಟಗಾರರು ವಿಶೇಷ ತನಿಖಾ ದಳದಿಂದ ರಚಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದರು ಅದರಂತೆ ಫೆ.20 ರಂದು ಕರ್ನಾಟಕ ಸರಕಾರ ಹೈಕೋರ್ಟ್ ಸೂಚನೆಯಂತೆ ಎಸ್.ಐ.ಟಿ ರಚಿಸಿ ಆದೇಶ ಮಾಡಿದ್ದರು.

ಶ್ರೀಧರ ಕೊಲೆ ಪ್ರಕರಣದ ಎಸ್‌.ಐ.ಟಿ ತನಿಖಾಧಿಕಾರಿಯಾಗಿರುವ ಡಿವೈಎಸ್ಪಿ ಹರೀಶ್.ಎಂ.ಆರ್, ಇನ್ಸ್‌ಪೆಕ್ಟರ್ ಡಾ.ನವೀನ್ ಕುಮಾರ್ ,ಸಬ್ ಇನ್ಸ್‌ಪೆಕ್ಟರ್ ಪುನೀತ್ ನೇತೃತ್ವದ ಸುಮಾರು 10 ಮಂದಿಯ ತಂಡ ಮಾ.2 ರಂದು ಬೆಳಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಬೆಂಗಳೂರು ಸಿಐಡಿ ಕಚೇರಿಯಲ್ಲಿದ್ದ ಶ್ರೀಧರ ಕೊಲೆ ಪ್ರಕರಣದ ದಾಖಲೆಗಳನ್ನು ಸಂಗ್ರಹಿಸಿ ಮೊದಲ ಹಂತದ ಸಭೆ ನಡೆಸಿ ಪ್ರಕರಣದ ತನಿಖೆ ಆರಂಭಿಸಿದ್ದಾರೆ.

Related posts

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ

Suddi Udaya

ಪುನರ್ವಸು 2.0 – ಇಂದ್ರಿಯ ಆರೋಗ್ಯವನ್ನು ಮುನ್ನೆಲೆಗೆ ತರುವ ಅಂತಾರಾಷ್ಟ್ರೀಯ ಆಯುರ್ವೇದ ಸಮ್ಮೇಳನ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ಬೆಳಾಲು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ

Suddi Udaya
error: Content is protected !!