23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

ಶಿಶಿಲ: ಶಿಶಿಲ ಗ್ರಾಮದ ಉಮ್ಮಂತಿಮಾರ್ ನಲ್ಲಿ ರೂ.2.50 ಕೋಟಿ ವೆಚ್ಚದ ಕಿಂಡಿ ಅಣೆಕಟ್ಟು ನಿರ್ಮಾಣ ಹಾಗೂ ಒಟ್ಲ ಪ್ರದೇಶದಲ್ಲಿ ರೂ.40 ಲಕ್ಷ ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಮಾ.2ರಂದು ಶಿಲಾನ್ಯಾಸವು ಕಾರ್ಯಕ್ರಮ ನೆರವೇರಿತು.

ಶಾಸಕ ಹರೀಶ್ ಪೂಂಜ ಅವರು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ಜನರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಈ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕಿಂಡಿ ಅಣೆಕಟ್ಟು ನಿರ್ಮಾಣದಿಂದ ನೀರಿನ ಸಂರಕ್ಷಣೆ ಹಾಗೂ ಕೃಷಿ ಚಟುವಟಿಕೆಗಳಿಗೆ ನೆರವಾಗಲಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.

ಒಟ್ಲ ಪ್ರದೇಶದ ಸೇತುವೆ ನಿರ್ಮಾಣದಿಂದ ಗ್ರಾಮಾಂತರ ಸಂಪರ್ಕ ವ್ಯವಸ್ಥೆ ಸುಧಾರಣೆ ಕಾಣಲಿದೆ ಶಿಬಾಜೆ ಗ್ರಾಮಕ್ಕೂ ಸಂಪರ್ಕಕ್ಕೆ ಅನುಕೂಲವಾಗಲಿದೆ. ಅದಲ್ಲದೆ ಶಿಶಿಲ ದೇವಸ್ಥಾನಕ್ಕೆ ಮತ್ತು ದೇವಸ ಭಾಗಕ್ಕೆ ಈ ಸೇತುವೆ ಮೂಲಕ ಸಂಪರ್ಕ ಕಲ್ಪಿಸಲಾಗುವುದು ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಸುಧೀನ್ ಡಿ, ಸಂದೀಪ್ ಅಮ್ಮುಡಂಗೆ, ಮಾಜಿ ಸದಸ್ಯರು, ಸ್ಥಳೀಯ ಮುಖಂಡರಾದ, ಕೊರಗಪ್ಪ ಗೌಡ, ಕರುಣಾಕರ ಶಿಶಿಲ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಚೇತನ ಚಂದ್ರಶೇಖರ, ಆನಂದ ಪೂಜಾರಿ, ರಾಧಾಕೃಷ್ಣ ಗುತ್ತು,ಸುಬ್ರಾಯ ಗೌಡ, ಕೆ ಜಿ ಗೋಖಲೆ, ಕುಶಾಲಪ್ಪ ಗೌಡ, ಗೋಪು ಗೋಖಲೆ, ರಮೇಶ್ ಒಟ್ಲ, ಸೀನಪ್ಪ, ಚೆನ್ನಪ್ಪ ಮಲೆಕುಡಿಯ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

Suddi Udaya

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!