25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

ಉಚಿತ ಕೌಶಲ್ಯಾಭಿವೃದ್ಧಿ ಮೂಲಕ ಉದ್ಯೋಗಾವಕಾಶಗಳಿಗೆ ಹೊಸ ದಾರಿ ಉಜಿರೆಯ RUDSET Institute ಸಂಸ್ಥೆಯಲ್ಲಿ ನಡೆದ ಅಕೌಂಟಿಂಗ್ ಟ್ಯಾಲಿ (Assistant Bookkeeper) ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಸಡಗರದಿಂದ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸುರೇಶ್ ವಿಟ್ಲ ಅವರು ಮಾತನಾಡಿ, “ಇಂದಿನ ಆಧುನಿಕ ವ್ಯವಹಾರದಲ್ಲಿ ಲೆಕ್ಕಾಚಾರ ಅತ್ಯಂತ ಮಹತ್ವದ್ದಾಗಿದೆ. ತೆರಿಗೆ ಲೆಕ್ಕಾಚಾರವನ್ನು ವೃತ್ತಿಯಾಗಿ ಆಯ್ಕೆ ಮಾಡಬಹುದಾದಷ್ಟು ಅವಕಾಶಗಳು ಇಂದು ಲಭ್ಯವಿವೆ. ಇಂತಹ ಪ್ರಾಯೋಗಿಕ ಹಾಗೂ ಉದ್ಯೋಗೋನ್ಮುಖ ವಿದ್ಯೆಯನ್ನು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ರುಡ್‌ಸೆಟ್ ಸಂಸ್ಥೆಯ ಮೂಲಕ ಉಚಿತವಾಗಿ ನೀಡುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ. ಬರುವ ದಿನಗಳಲ್ಲಿ ಹೊಸ ಹೊಸ ಬದಲಾವಣೆಗಳು ಆಗುತ್ತವೆ. ಅವನ್ನು ಸರಳವಾಗಿ ಮತ್ತು ಸುಲಭವಾಗಿ ನಿರ್ವಹಿಸಲು ನಿರಂತರ ಅಭ್ಯಾಸ ಅಗತ್ಯ. ಹೆಚ್ಚು ಅಭ್ಯಾಸ ಮಾಡಿ ತಮ್ಮ ಭವಿಷ್ಯವನ್ನು ಉಜ್ವಲವಾಗಿಸಿಕೊಳ್ಳಬೇಕು,” ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕ ಅಜೇಯ ವಹಿಸಿದ್ದರು. ಸಂಸ್ಥೆಯ ಹಿರಿಯ ಅಬ್ರಹಾಂ ಜೇಮ್ಸ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನೆ ಪೂರ್ವಭಾವಿ ಸಭೆ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಂದ ಸಿಯೋನ್ ಆಶ್ರಮ ಟ್ರಸ್ಟ್‌ಗೆ ಭೇಟಿ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕೊಕ್ಕಡ: ಅನಂತರಾಮ ಉಪ್ಪಾರ್ಣ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

Suddi Udaya
error: Content is protected !!