May 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ

ಬೆಳ್ತಂಗಡಿ : ಶಿಬಾಜೆ ತೋಟದಲ್ಲಿ ಶೀಧರ ಕೊಲೆ ಪ್ರಕರಣದ ಸಂಬಂಧ ಎಸ್ಐಟಿ ಅಧಿಕಾರಿಗಳು ದೂರುದಾರ ಹರೀಶ್.ಬಿ.ಮುಗೇರ ಅವರಿಗೆ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರ ಫಾರ್ಮ್‌ ಗುತ್ತು ಮನೆಯ ತೋಟದಲ್ಲಿ ಶ್ರೀಧರ (30) ಎಂಬವರನ್ನು 18-12-2022 ರಂದು ಕೊಲೆ ಮಾಡಿದ ಪ್ರಕರಣ ಸಂಬಂಧ ಮರುತನಿಖೆ ನಡೆಸಲು ಹೈಕೋರ್ಟ್ ಆದೇಶ ಮಾಡಿದಂತೆ ಎಸ್ಐಟಿ ಅಧಿಕಾರಿಗಳು ಮಾ.2 ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ಪ್ರಕರಣ ಸಂಬಂಧ ಶ್ರೀಧರ ಕೊಲೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಶಿಬಾಜೆಯ ಹರೀಶ್.ಬಿ.ಮುಗೇರ ಎಂಬವರಿಗೆ ಎಸ್ಐಟಿ ತನಿಖಾಧಿಕಾರಿ ಡಿವೈಎಸ್ಪಿ ಹರೀಶ್.ಎಂ.ಆರ್ ಅವರು ಮಾ.3 ರಂದು ಹರೀಶ್ ಮನೆಗೆ ತೆರಳಿ ವಿಚಾರಣೆಗಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ನೋಟಿಸ್ ತಲುಪಿದ ಕೂಡಲೇ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕೆಂದು ನೋಟಿಸ್ ಜಾರಿ ಮಾಡಿದ್ದಾರೆ.

Related posts

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕಣಿಯೂರು ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya
error: Content is protected !!