25.1 C
ಪುತ್ತೂರು, ಬೆಳ್ತಂಗಡಿ
August 5, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ

ಬೆಳ್ತಂಗಡಿ : ಶಿಬಾಜೆ ತೋಟದಲ್ಲಿ ಶೀಧರ ಕೊಲೆ ಪ್ರಕರಣದ ಸಂಬಂಧ ಎಸ್ಐಟಿ ಅಧಿಕಾರಿಗಳು ದೂರುದಾರ ಹರೀಶ್.ಬಿ.ಮುಗೇರ ಅವರಿಗೆ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರ ಫಾರ್ಮ್‌ ಗುತ್ತು ಮನೆಯ ತೋಟದಲ್ಲಿ ಶ್ರೀಧರ (30) ಎಂಬವರನ್ನು 18-12-2022 ರಂದು ಕೊಲೆ ಮಾಡಿದ ಪ್ರಕರಣ ಸಂಬಂಧ ಮರುತನಿಖೆ ನಡೆಸಲು ಹೈಕೋರ್ಟ್ ಆದೇಶ ಮಾಡಿದಂತೆ ಎಸ್ಐಟಿ ಅಧಿಕಾರಿಗಳು ಮಾ.2 ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ಪ್ರಕರಣ ಸಂಬಂಧ ಶ್ರೀಧರ ಕೊಲೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಶಿಬಾಜೆಯ ಹರೀಶ್.ಬಿ.ಮುಗೇರ ಎಂಬವರಿಗೆ ಎಸ್ಐಟಿ ತನಿಖಾಧಿಕಾರಿ ಡಿವೈಎಸ್ಪಿ ಹರೀಶ್.ಎಂ.ಆರ್ ಅವರು ಮಾ.3 ರಂದು ಹರೀಶ್ ಮನೆಗೆ ತೆರಳಿ ವಿಚಾರಣೆಗಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ನೋಟಿಸ್ ತಲುಪಿದ ಕೂಡಲೇ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕೆಂದು ನೋಟಿಸ್ ಜಾರಿ ಮಾಡಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ವರಕಬೆ ಬಳಿ ಕಾರುಗಳು ಹಾಗೂ ಬೈಕ್ ನಡುವೆ ಸರಣಿ ಅಪಘಾತ

Suddi Udaya

ನಿಡ್ಲೆ: ಬರೆಂಗಾಯ ಪುಳಿತ್ತಡಿ ನಿವಾಸಿ ನಾರಾಯಣ ರೈ ನಿಧನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಗುರುವಾಯನಕೆರೆ: ಕಬ್ಬಿನ ಹಿತ್ತಿಲು ನಿವಾಸಿ ಕಮಲ ನಾಯ್ಕ್ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya
error: Content is protected !!