25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

ಉಚಿತ ಕೌಶಲ್ಯಾಭಿವೃದ್ಧಿ ಮೂಲಕ ಉದ್ಯೋಗಾವಕಾಶಗಳಿಗೆ ಹೊಸ ದಾರಿ ಉಜಿರೆಯ RUDSET Institute ಸಂಸ್ಥೆಯಲ್ಲಿ ನಡೆದ ಅಕೌಂಟಿಂಗ್ ಟ್ಯಾಲಿ (Assistant Bookkeeper) ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಸಡಗರದಿಂದ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸುರೇಶ್ ವಿಟ್ಲ ಅವರು ಮಾತನಾಡಿ, “ಇಂದಿನ ಆಧುನಿಕ ವ್ಯವಹಾರದಲ್ಲಿ ಲೆಕ್ಕಾಚಾರ ಅತ್ಯಂತ ಮಹತ್ವದ್ದಾಗಿದೆ. ತೆರಿಗೆ ಲೆಕ್ಕಾಚಾರವನ್ನು ವೃತ್ತಿಯಾಗಿ ಆಯ್ಕೆ ಮಾಡಬಹುದಾದಷ್ಟು ಅವಕಾಶಗಳು ಇಂದು ಲಭ್ಯವಿವೆ. ಇಂತಹ ಪ್ರಾಯೋಗಿಕ ಹಾಗೂ ಉದ್ಯೋಗೋನ್ಮುಖ ವಿದ್ಯೆಯನ್ನು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ರುಡ್‌ಸೆಟ್ ಸಂಸ್ಥೆಯ ಮೂಲಕ ಉಚಿತವಾಗಿ ನೀಡುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ. ಬರುವ ದಿನಗಳಲ್ಲಿ ಹೊಸ ಹೊಸ ಬದಲಾವಣೆಗಳು ಆಗುತ್ತವೆ. ಅವನ್ನು ಸರಳವಾಗಿ ಮತ್ತು ಸುಲಭವಾಗಿ ನಿರ್ವಹಿಸಲು ನಿರಂತರ ಅಭ್ಯಾಸ ಅಗತ್ಯ. ಹೆಚ್ಚು ಅಭ್ಯಾಸ ಮಾಡಿ ತಮ್ಮ ಭವಿಷ್ಯವನ್ನು ಉಜ್ವಲವಾಗಿಸಿಕೊಳ್ಳಬೇಕು,” ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕ ಅಜೇಯ ವಹಿಸಿದ್ದರು. ಸಂಸ್ಥೆಯ ಹಿರಿಯ ಅಬ್ರಹಾಂ ಜೇಮ್ಸ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ ಬಂಧನ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ಇಂಗ್ಲಿಷ್ ಮತ್ತು ಸಮಾಜಶಾಸ್ತ್ರ ವಿಷಯಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!