24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

ಉಚಿತ ಕೌಶಲ್ಯಾಭಿವೃದ್ಧಿ ಮೂಲಕ ಉದ್ಯೋಗಾವಕಾಶಗಳಿಗೆ ಹೊಸ ದಾರಿ ಉಜಿರೆಯ RUDSET Institute ಸಂಸ್ಥೆಯಲ್ಲಿ ನಡೆದ ಅಕೌಂಟಿಂಗ್ ಟ್ಯಾಲಿ (Assistant Bookkeeper) ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಸಡಗರದಿಂದ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸುರೇಶ್ ವಿಟ್ಲ ಅವರು ಮಾತನಾಡಿ, “ಇಂದಿನ ಆಧುನಿಕ ವ್ಯವಹಾರದಲ್ಲಿ ಲೆಕ್ಕಾಚಾರ ಅತ್ಯಂತ ಮಹತ್ವದ್ದಾಗಿದೆ. ತೆರಿಗೆ ಲೆಕ್ಕಾಚಾರವನ್ನು ವೃತ್ತಿಯಾಗಿ ಆಯ್ಕೆ ಮಾಡಬಹುದಾದಷ್ಟು ಅವಕಾಶಗಳು ಇಂದು ಲಭ್ಯವಿವೆ. ಇಂತಹ ಪ್ರಾಯೋಗಿಕ ಹಾಗೂ ಉದ್ಯೋಗೋನ್ಮುಖ ವಿದ್ಯೆಯನ್ನು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ರುಡ್‌ಸೆಟ್ ಸಂಸ್ಥೆಯ ಮೂಲಕ ಉಚಿತವಾಗಿ ನೀಡುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ. ಬರುವ ದಿನಗಳಲ್ಲಿ ಹೊಸ ಹೊಸ ಬದಲಾವಣೆಗಳು ಆಗುತ್ತವೆ. ಅವನ್ನು ಸರಳವಾಗಿ ಮತ್ತು ಸುಲಭವಾಗಿ ನಿರ್ವಹಿಸಲು ನಿರಂತರ ಅಭ್ಯಾಸ ಅಗತ್ಯ. ಹೆಚ್ಚು ಅಭ್ಯಾಸ ಮಾಡಿ ತಮ್ಮ ಭವಿಷ್ಯವನ್ನು ಉಜ್ವಲವಾಗಿಸಿಕೊಳ್ಳಬೇಕು,” ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕ ಅಜೇಯ ವಹಿಸಿದ್ದರು. ಸಂಸ್ಥೆಯ ಹಿರಿಯ ಅಬ್ರಹಾಂ ಜೇಮ್ಸ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya
error: Content is protected !!