28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

ಉಚಿತ ಕೌಶಲ್ಯಾಭಿವೃದ್ಧಿ ಮೂಲಕ ಉದ್ಯೋಗಾವಕಾಶಗಳಿಗೆ ಹೊಸ ದಾರಿ ಉಜಿರೆಯ RUDSET Institute ಸಂಸ್ಥೆಯಲ್ಲಿ ನಡೆದ ಅಕೌಂಟಿಂಗ್ ಟ್ಯಾಲಿ (Assistant Bookkeeper) ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಸಡಗರದಿಂದ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸುರೇಶ್ ವಿಟ್ಲ ಅವರು ಮಾತನಾಡಿ, “ಇಂದಿನ ಆಧುನಿಕ ವ್ಯವಹಾರದಲ್ಲಿ ಲೆಕ್ಕಾಚಾರ ಅತ್ಯಂತ ಮಹತ್ವದ್ದಾಗಿದೆ. ತೆರಿಗೆ ಲೆಕ್ಕಾಚಾರವನ್ನು ವೃತ್ತಿಯಾಗಿ ಆಯ್ಕೆ ಮಾಡಬಹುದಾದಷ್ಟು ಅವಕಾಶಗಳು ಇಂದು ಲಭ್ಯವಿವೆ. ಇಂತಹ ಪ್ರಾಯೋಗಿಕ ಹಾಗೂ ಉದ್ಯೋಗೋನ್ಮುಖ ವಿದ್ಯೆಯನ್ನು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ರುಡ್‌ಸೆಟ್ ಸಂಸ್ಥೆಯ ಮೂಲಕ ಉಚಿತವಾಗಿ ನೀಡುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ. ಬರುವ ದಿನಗಳಲ್ಲಿ ಹೊಸ ಹೊಸ ಬದಲಾವಣೆಗಳು ಆಗುತ್ತವೆ. ಅವನ್ನು ಸರಳವಾಗಿ ಮತ್ತು ಸುಲಭವಾಗಿ ನಿರ್ವಹಿಸಲು ನಿರಂತರ ಅಭ್ಯಾಸ ಅಗತ್ಯ. ಹೆಚ್ಚು ಅಭ್ಯಾಸ ಮಾಡಿ ತಮ್ಮ ಭವಿಷ್ಯವನ್ನು ಉಜ್ವಲವಾಗಿಸಿಕೊಳ್ಳಬೇಕು,” ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕ ಅಜೇಯ ವಹಿಸಿದ್ದರು. ಸಂಸ್ಥೆಯ ಹಿರಿಯ ಅಬ್ರಹಾಂ ಜೇಮ್ಸ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya
error: Content is protected !!