28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿ ಪ್ರದೇಶದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.1ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಸ್ಥಳೀಯ ರೈತಾಪಿ ವರ್ಗದ ಬಹುಕಾಲದ ಬೇಡಿಕೆಗೆ ಸ್ಪಂದಿಸಿ, ಈ ಯೋಜನೆಯ ಅಗತ್ಯತೆಯನ್ನು ಮಾನ್ಯ ಸಣ್ಣ ನೀರಾವರಿ ಸಚಿವರ ಗಮನಕ್ಕೆ ತಂದು ಸಮಗ್ರವಾಗಿ ಮನವರಿಕೆ ಮಾಡಲಾಗಿದ್ದು, ಅದರ ಫಲವಾಗಿ ಅನುದಾನ ಮಂಜೂರಾಗಿದೆ. ಈ ಕಾಮಗಾರಿಯಿಂದ ಕೃಷಿ ಜಮೀನುಗಳಿಗೆ ಸಮರ್ಪಕ ನೀರಾವರಿ ಸೌಲಭ್ಯ ಲಭಿಸುವುದರ ಜೊತೆಗೆ ಸೇತುವೆ ನಿರ್ಮಾಣದಿಂದ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆಯೂ ಒದಗಲಿದೆ.

ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಿದ ರಾಜ್ಯ ಸರ್ಕಾರಕ್ಕೆ ಹಾಗೂ ವಿಶೇಷ ಸಹಕಾರ ನೀಡಿದ ಮಾನ್ಯ ಸಣ್ಣ ನೀರಾವರಿ ಸಚಿವರಿಗೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Related posts

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

Suddi Udaya

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!