May 6, 2026
Uncategorizedಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

ಗೇರುಕಟ್ಟೆ: ಕಳಿಯ ಗ್ರಾಮದ ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ ಮಹಾಸಭೆಯು ನಡೆದು, ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಭಜನಾ ಮಂಡಳಿಯ ಅಧ್ಯಕ್ಷರಾದ ಸತೀಶ್ ಗೌಡ ಕುಳಾಯಿ ಇವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು.

ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜನಾರ್ದನ ಗೌಡ ಶುಭೋದಯ ಕುಳಾಯಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುಂದರ ನಾಯ್ಕ್ ಕುಳಾಯಿ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ನಂದೀಶ್ ಶೆಟ್ಟಿ ಹರ್ಮಾಡಿ , ಕಾರ್ಯದರ್ಶಿಯಾಗಿ ಕೇಶವ ಪೂಜಾರಿ ನೆಲ್ಲಿಕಟ್ಟೆ ಹಾಗೂ ಕೋಶಾಧಿಕಾರಿಯಾಗಿ ರವೀಂದ್ರ ಪೂಜಾರಿ ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಪ್ರಧಾನ ಅರ್ಚಕ ದರ್ಣಪ್ಪ ಪೂಜಾರಿ, ಕಳಿಯ ಗ್ರಾ. ಪಂ. ಮಾಜಿ ಅಧ್ಯಕ್ಷ ದಿವಾಕರ ಪೂಜಾರಿ ಮೆದಿನ, ಅಶೋಕ್ ಆಚಾರ್ಯ, ಶಿವರಾಮ್ ಗೌಡ ದಾಸರಬೆಟ್ಟು, ಹಿರಿಯರಾದ ದಾಮೋದರ್ ಶೆಟ್ಟಿ ಹರ್ಮಾಡಿ, ಸುಂದರ ಗೌಡ ಉಬರಡ್ಕ, ಶೇಖರ ಪೂಜಾರಿ ಹಾಗೂ ಭಜನಾ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

Suddi Udaya

ಮಂಗ, ಕಾಡುಹಂದಿ, ನವಿಲುಗಳ ಹಾವಳಿಯಿಂದ ಕೃಷಿ ಮತ್ತು ಫಸಲು ನಾಶದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವಂತೆ ಅರಣ್ಯ ಸಚಿವರಿಗೆ ಬೆಳ್ತಂಗಡಿ ಅಖಿಲ ಭಾರತ ಕಿಸಾನ್ ಮಹಾಸಭಾ ವತಿಯಿಂದ ಮನವಿ ಸಲ್ಲಿಕೆ

Suddi Udaya
error: Content is protected !!