May 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಸಂಚಾರಿ ಪೊಲೀಸರು

ಬೆಳ್ತಂಗಡಿ : ಹಲವು ಸಮಯಗಳಿಂದ ರಸ್ತೆಗಳಲ್ಲಿ ವಿವಿಧ ಭಂಗಿಗಳಲ್ಲಿ ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ವೀಲಿಂಗ್‌ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಯುವಕನನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಜಂಕ್ಷನ್ ರಸ್ತೆಯಲ್ಲಿ ಫೆ.8ರಂದು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಡ್ಯಾನಿ ಫ್ರಾನ್ಸಿಸ್ ತಾವ್ರೋ ಎಂಬವರು ಕರ್ತವ್ಯದ ವೇಳೆ ಹೆಲ್ಮೆಟ್ ಧರಿಸದೆ ಆಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಯ ಪ್ರಾಣಕ್ಕೆ ಹಾನಿಯಾಗುವಂತೆ ವೀಲಿಂಗ್ ಮಾಡಿಕೊಂಡು ಧರ್ಮಸ್ಥಳ ರಸ್ತೆಯ ಮೂಲಕ ಪರಾರಿಯಾಗಿದ್ದ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಘಟನೆಯ ವರದಿಯನ್ನು ಮಾಡಿದ್ದರು. ಬಳಿಕ ಈತ ವಿವಿಧ ಕಡೆಗಳಲ್ಲಿ ಅಪಾಯಕಾರಿಯಾಗಿ ವೀಲಿಂಗ್ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ವಿಡಿಯೋಗಳನ್ನು ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದರು ಅದ್ರೆ ಸವಾರ ಮಾತ್ರ ಪೊಲೀಸರ ಕೈಗೆ ಸಿಗುತ್ತಿರಲಿಲ್ಲ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್ ಪಿ ಅವರ ನೇತೃತ್ವದ ತಂಡ ಮಾ.2 ರಂದು ಬೆಳ್ತಂಗಡಿ, ಉಜಿರೆ ಕಡೆ ಹುಡುಕಾಟ ನಡೆಸಿ ಸವಾರನ ಬಗ್ಗೆ ಮಾಹಿತಿದಾರರು ನೀಡಿದ ಖಚಿತ ಮಾಹಿತಿ ಮೇರೆಗೆ ಅಪಾಯಕಾರಿ ವೀಲಿಂಗ್ ಮಾಡುತ್ತಿದ್ದ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನೂಜಿಲಾ ನಿವಾಸಿ ಬಾಸ್ಕರ ಗೌಡ ಎಂಬವರ ಪುತ್ರ ಸಂಪತ್(30) ಎಂಬಾತನನ್ನು ಪತ್ತೆ ಹಚ್ಚಿ ಆತ ವೀಲಿಂಗ್ ಮಾಡಲು ಬಳಸಿ ಕಪ್ಪು ಬಣ್ಣದ ಹಿಮಾಲಯನ್ KA-21-EE-1486 ನಂಬರಿನ ಬೈಕ್ ಸಮೇತ ವಶಕ್ಕೆ ಪಡೆದುಕೊಂಡು ಕಲಂ 281 BNS 184,189 IMV ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿನಿ ಸಿ.ಕೆ ಮತ್ತು ವೃತ್ತ ನಿರೀಕ್ಷಕ ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್.ಪಿ ನೇತೃತ್ವದಲ್ಲಿ ಸಿಬ್ಬಂದಿ ಡ್ಯಾನಿ ಫ್ರಾನ್ಸಿಸ್ ತಾವ್ರೋ, ಇಬ್ರಾಹಿಂ,ಅಭಿಜಿತ್, ಹಿತೋಷ್, ಜಾವೀದ್ ಪಾಟೀಲ್,ಚಾಲಕ ಸತ್ಯಪ್ರಕಾಶ್ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಉಸ್ಮಾನ್ ಆದಿಲ್ ಕುಮಿಟೆ ವಿಭಾಗದಲ್ಲಿ ಪ್ರಥಮ

Suddi Udaya

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

Suddi Udaya

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

Suddi Udaya
error: Content is protected !!