25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿ-ಜಿಲ್ಲಾ ಚುನಾವಣಾಧಿಕಾರಿ

ಬೆಳ್ತಂಗಡಿ: ಚುನಾವಣಾ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಘೋಷಣೆ ಶೀಘ್ರದಲ್ಲೇ ನಿರೀಕ್ಷಿಸಲಾಗಿರುವುದರಿಂದ, ಪೂರ್ವಭಾವಿ ಚಟುವಟಿಕೆಯಾದ ಮ್ಯಾಪಿಂಗ್ ಕಾರ್ಯ ಪ್ರಗತಿಯಲ್ಲಿದ್ದು, ೨೦೦೨ ರ ಮತದಾರರ ಪಟ್ಟಿಗೆ ಸಂಬAಧಿಸಿದ ವಿವರಗಳನ್ನು ತಮ್ಮ ವ್ಯಾಪ್ತಿಗೆ ಸಂಬAಧಿಸಿದ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ರವರಿಗೆ ಮಾಹಿತಿಯನ್ನು ನೀಡಿ ಮ್ಯಾಪಿಂಗ್ ಮಾಡಿಸಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮ್ಯಾಪಿಂಗ್ ಅಂದರೆ 2002 ರ ಮತದಾರರ ಪಟ್ಟಿಯನ್ನು ೨೦೨೫ ರ ಮತದಾರರ ಪಟ್ಟಿಗೆ ಜೋಡನೆ ಮಾಡುವುದು. ಸಂತತಿ ಮ್ಯಾಪಿಂಗ್ ಅಂದರೆ, 2002 ರ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ನೋಂದಣಿಯಾಗದಿದ್ದಲ್ಲಿ ಅವರ ತಂದೆ / ತಾಯಿ / ಅಜ್ಜ / ಅಜ್ಜಿಯವರ ಭಾಗ ಸಂಖ್ಯೆ ಹಾಗೂ ಕ್ರಮ ಸಂಖ್ಯೆಯೊAದಿಗೆ ಜೋಡನೆ ಮಾಡಿಕೊಳ್ಳುವುದು.

2002 ರ ಮತದಾರರಾಗಿದ್ದಲ್ಲಿ ನೀವು 2002 ರಲ್ಲಿ ವಾಸವಿದ್ದಂತಹ ವಿಧಾನ ಸಭಾ ಕ್ಷೇತ್ರ ಹೆಸರು /ಸಂಖ್ಯೆ, ಭಾಗ ಸಂಖ್ಯೆ ಹಾಗೂ ಕ್ರಮ ಸಂಖ್ಯೆಯನ್ನು ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿ ರವರಿಗೆ ಮತದಾರರು ಮಾಹಿತಿ ನೀಡಿ ಸಹಕರಿಸಿ.
ಒಂದು ವೇಳೆ ನೀವು 2002 ರಲ್ಲಿ ಮತದಾರರಾಗಿ ಇಲ್ಲದಿದ್ದಲ್ಲಿ, ನಿಮ್ಮ ತಂದೆ / ತಾಯಿ / ಅಜ್ಜ /ಅಜ್ಜಿಯವರು ವಾಸವಿದ್ದಂತಹ ವಿಧಾನ ಸಭಾ ಕ್ಷೇತ್ರದ ಹೆಸರು / ಸಂಖ್ಯೆ, ಭಾಗ ಸಂಖ್ಯೆ, ಹಾಗೂ ಕ್ರಮ ಸಂಖ್ಯೆಯನ್ನು ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿ ರವರಿಗೆ ಮತದಾರರು ಮಾಹಿತಿ ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2002 ರ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರುಗಳನ್ನು ಈ ಕೆಳಗಿನ ಲಿಂಕ್ ಮೂಲಕ ಹುಡುಕಬಹುದು

https://ceo.karnataka.gov.in/search/en ಅಥವಾ https://voters.eci.gov.in/searchInSIR/S2UA4DPDF-JK4QWODSE

ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿಯವರ ದೂರವಾಣಿ ಸಂಖ್ಯೆ ಪಡೆಯಲು ಈ ಕೆಳಗಿನ ಲಿಂಕ್ ಮೂಲಕ ಹುಡುಕಬಹುದು https://electoralsearch.eci.gov.in/uesfmempmlkypo ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ಬೂತ್ ಮಟ್ಟದ ಅಧಿಕಾರಿಯವರು ಕರೆ ಸ್ವೀಕರಿಸದ್ದಿದಲ್ಲಿ ಈ ಕೆಳಗಿನ ಲಿಂಕ್ ಮೂಲಕ Book ಮಾಡಬಹುದು (Book a Call with BLO) https://voters.eci.gov.in/home/bookACallRequest ಸಾರ್ವಜನಿಕರು ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಮ್ಯಾಪಿಂಗ್ ಕಾರ್ಯವನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಸಹಕರಿಸುವಂತೆ ಕೋರಿದೆ.

Related posts

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!