24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿ-ಜಿಲ್ಲಾ ಚುನಾವಣಾಧಿಕಾರಿ

ಬೆಳ್ತಂಗಡಿ: ಚುನಾವಣಾ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಘೋಷಣೆ ಶೀಘ್ರದಲ್ಲೇ ನಿರೀಕ್ಷಿಸಲಾಗಿರುವುದರಿಂದ, ಪೂರ್ವಭಾವಿ ಚಟುವಟಿಕೆಯಾದ ಮ್ಯಾಪಿಂಗ್ ಕಾರ್ಯ ಪ್ರಗತಿಯಲ್ಲಿದ್ದು, ೨೦೦೨ ರ ಮತದಾರರ ಪಟ್ಟಿಗೆ ಸಂಬAಧಿಸಿದ ವಿವರಗಳನ್ನು ತಮ್ಮ ವ್ಯಾಪ್ತಿಗೆ ಸಂಬAಧಿಸಿದ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ರವರಿಗೆ ಮಾಹಿತಿಯನ್ನು ನೀಡಿ ಮ್ಯಾಪಿಂಗ್ ಮಾಡಿಸಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮ್ಯಾಪಿಂಗ್ ಅಂದರೆ 2002 ರ ಮತದಾರರ ಪಟ್ಟಿಯನ್ನು ೨೦೨೫ ರ ಮತದಾರರ ಪಟ್ಟಿಗೆ ಜೋಡನೆ ಮಾಡುವುದು. ಸಂತತಿ ಮ್ಯಾಪಿಂಗ್ ಅಂದರೆ, 2002 ರ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ನೋಂದಣಿಯಾಗದಿದ್ದಲ್ಲಿ ಅವರ ತಂದೆ / ತಾಯಿ / ಅಜ್ಜ / ಅಜ್ಜಿಯವರ ಭಾಗ ಸಂಖ್ಯೆ ಹಾಗೂ ಕ್ರಮ ಸಂಖ್ಯೆಯೊAದಿಗೆ ಜೋಡನೆ ಮಾಡಿಕೊಳ್ಳುವುದು.

2002 ರ ಮತದಾರರಾಗಿದ್ದಲ್ಲಿ ನೀವು 2002 ರಲ್ಲಿ ವಾಸವಿದ್ದಂತಹ ವಿಧಾನ ಸಭಾ ಕ್ಷೇತ್ರ ಹೆಸರು /ಸಂಖ್ಯೆ, ಭಾಗ ಸಂಖ್ಯೆ ಹಾಗೂ ಕ್ರಮ ಸಂಖ್ಯೆಯನ್ನು ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿ ರವರಿಗೆ ಮತದಾರರು ಮಾಹಿತಿ ನೀಡಿ ಸಹಕರಿಸಿ.
ಒಂದು ವೇಳೆ ನೀವು 2002 ರಲ್ಲಿ ಮತದಾರರಾಗಿ ಇಲ್ಲದಿದ್ದಲ್ಲಿ, ನಿಮ್ಮ ತಂದೆ / ತಾಯಿ / ಅಜ್ಜ /ಅಜ್ಜಿಯವರು ವಾಸವಿದ್ದಂತಹ ವಿಧಾನ ಸಭಾ ಕ್ಷೇತ್ರದ ಹೆಸರು / ಸಂಖ್ಯೆ, ಭಾಗ ಸಂಖ್ಯೆ, ಹಾಗೂ ಕ್ರಮ ಸಂಖ್ಯೆಯನ್ನು ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿ ರವರಿಗೆ ಮತದಾರರು ಮಾಹಿತಿ ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2002 ರ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರುಗಳನ್ನು ಈ ಕೆಳಗಿನ ಲಿಂಕ್ ಮೂಲಕ ಹುಡುಕಬಹುದು

https://ceo.karnataka.gov.in/search/en ಅಥವಾ https://voters.eci.gov.in/searchInSIR/S2UA4DPDF-JK4QWODSE

ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿಯವರ ದೂರವಾಣಿ ಸಂಖ್ಯೆ ಪಡೆಯಲು ಈ ಕೆಳಗಿನ ಲಿಂಕ್ ಮೂಲಕ ಹುಡುಕಬಹುದು https://electoralsearch.eci.gov.in/uesfmempmlkypo ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ಬೂತ್ ಮಟ್ಟದ ಅಧಿಕಾರಿಯವರು ಕರೆ ಸ್ವೀಕರಿಸದ್ದಿದಲ್ಲಿ ಈ ಕೆಳಗಿನ ಲಿಂಕ್ ಮೂಲಕ Book ಮಾಡಬಹುದು (Book a Call with BLO) https://voters.eci.gov.in/home/bookACallRequest ಸಾರ್ವಜನಿಕರು ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಮ್ಯಾಪಿಂಗ್ ಕಾರ್ಯವನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಸಹಕರಿಸುವಂತೆ ಕೋರಿದೆ.

Related posts

ಆಮಂತ್ರಣ ವೇದಿಕೆಯ ಅಧ್ಯಕ್ಷೆ ವಿದ್ಯಾಶ್ರೀ ಅಡೂರ್ ರವರ “ಕವಿತೆಯೆoಬ ಕೇದಗೆ” ಭಾವಗೀತೆಯ ಧ್ವನಿ ಮುದ್ರಣ ಬಿಡುಗಡೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ನಯನಾಡು ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

Suddi Udaya

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya
error: Content is protected !!