24.6 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.7: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಬೆಳಾಲು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

ಬೆಳಾಲು:ಡಿಪಿ ಸ್ಫೋರ್ಟ್ಸ್ ಕ್ಲಬ್‌ ಬೆಳಾಲು ಇದರ ಆಶ್ರಯದಲ್ಲಿ ಬೆಳಾಲು ಗುತ್ತು ಮನೆಯ ಜೀವಂಧರ್ ಕುಮಾರ್ ಜೈನ್ ಮತ್ತು ಡಿ.ಪಿ. ಸದಸ್ಯ ಪ್ರವೀಣ್ ಎಸ್.ಎಲ್. ಇವರ ಸ್ಮರಣಾರ್ಥ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಶಿಯೇಶನ್ ಇದರ ಸಹಯೋಗದೊಂದಿಗೆ 11ನೇ ವರ್ಷದ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟವು ಮಾ.7ರಂದು ಬೆಳಾಲು ದೊಂಪದಪಲ್ಕೆಯಲ್ಲಿ ನಡೆಯಲಿದೆ.

ಕ್ರೀಡಾಕೂಟದ ಉದ್ಘಾಟನೆಯನ್ನು ಮಾರ್ಗದರ್ಶಕರಾದ ಹೇಮಾವತಿ ಜೀವಂಧರ್‌ ಜೈನ್ ನೆರವೇರಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಶಾಸಕ ಹರೀಶ್‌ ಪೂಂಜ ವಹಿಸಲಿದ್ದಾರೆ.

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಹರೀಶ್ ಆರಿಕೋಡಿ ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ. ಅರಸಿನಮಕ್ಕಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ನಿವೃತ್ತ ಉದ್ಯೋಗಿ ಸಂಜೀವ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ , ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್‌ ಮಾಲಕ ಮೋಹನ್ ಕುಮಾರ್, ಎಕ್ಸೆಲ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್‌ ಕುಮಾರ್‌ ಜೈನ್ ಬಿ. ಹಾಗೂ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಡಿಪಿ ಸ್ಫೋರ್ಟ್ಸ್ ಕ್ಲಬ್‌ ಅಧ್ಯಕ್ಷ ದಿನೇಶ್ ಗೌಡ ವಹಿಸಲಿದ್ದಾರೆ. ಅತಿಥಿಗಳಾಗಿ ತಾಲೂಕು ಜನ ಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ತಿಮ್ಮಪ್ಪ ಗೌಡ ಬನಂದೂರು, ಬೆಳಾಲು ಸೇವಾ ಸಹಕಾರಿ ಬ್ಯಾಂಕ್‌ ಉಪಾಧ್ಯಕ್ಷ ದಿನೇಶ್‌ ಕೋಟ್ಯಾನ್‌ ಹಾಗೂ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.

Related posts

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಬಂದಾರು : ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya
error: Content is protected !!