28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

ಉಜಿರೆ: ಶ್ರೀ ಧರ್ಮಸ್ಠಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್.) ದಲ್ಲಿ ಮಾ.2ರಂದು 2025-26ನೇ ಸಾಲಿನ ಬಿ.ಎಡ್. ತರಗತಿಯ ಪ್ರಾರಂಭೋತ್ಸವ “ದೀಕ್ಷಾನ್ವಯ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿಜ್ಞಾನ ವಿಭಾಗ ಮುಖ್ಯಸ್ಥ ರಾಜೇಶ್ ಕಕ್ರನ್ನಾಯ ಎ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಶಿಕ್ಷಕ ಬೋಧನೆ ಉತ್ತಮವಾಗಿರಬೇಕಾದರೆ ತರಬೇತಿ ಮುಖ್ಯವಾಗಿರುತ್ತದೆ. ಪ್ರತಿಯೊಬ್ಬ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾದರಿ ಶಿಕ್ಷಕರಾಗಬೇಕಾದರೆ ಶಿಸ್ತು, ತಾಳ್ಮೆ, ಕ್ರಿಯಾಶೀಲತೆ, ಸಮಯ ಪ್ರಜ್ಞೆ, ಕರ್ತವ್ಯ ನಿಷ್ಠೆ ಹಾಗೂ ಕುಶಲತೆ ಹೊಂದಿರಬೇಕು. ಶಿಕ್ಷಕ ವೃತ್ತಿಯು ಉಳಿದೆಲ್ಲಾ ವೃತ್ತಿಗಳಿಗಿಂತಲೂ ಶ್ರೇಷ್ಠವಾದದ್ದು ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಸಲ್ಡಾನ ಮಾತನಾಡಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಸಂಸ್ಕೃತಿ ಮತ್ತು ಶಿಕ್ಷಕ ತರಬೇತಿಯಿಂದ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ. ಗುಣಮಟ್ಟದ ಶಿಕ್ಷಣ ದೊರಕುವುದಲ್ಲದೇ ಸರ್ವತೋಮುಖ ಕೌಶಲಗಳನ್ನು ಮೈಗೂಡಿಸಿಕೊಳ್ಳಲು ಶಿಕ್ಷಕ ತರಬೇತಿಯ ಅವಶ್ಯಕತೆ ಇದೆ ಎಂದರು.

ವೇದಿಕೆಯಲ್ಲಿ ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ಸಂಯೋಜಕಿ ಅನುಷಾ ಡಿ. ಜೆ. ಹಾಗೂ ವಿದ್ಯಾರ್ಥಿ ನಾಯಕಿ ಸಾಯಿದೃತಿ ಶೆಟ್ಟಿ ಉಪಸ್ಥಿತರಿದ್ದರು.

ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳನ್ನು ಭಾರತದ ನಕಾಶೆಯ ಸುತ್ತಲು ದೀಪ ಬೆಳಗಿಸುವ ಮೂಲಕ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವೃಂದದವರು, ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಪೋಷಕರು ಹಾಗೂ ಬಿ.ಎಡ್. ಮತ್ತು ಡಿ.ಎಡ್. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ವರ್ಷ ಸ್ವಾಗತಿಸಿ, ಯಶಸ್ವಿನಿ ವಂದಿಸಿ, ಎ. ಎಸ್. ಪೂಜಾ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಸಿನರ್ಜಿ” ವಿಭಾಗ ವಿದ್ಯಾರ್ಥಿ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

Suddi Udaya

ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಪದ್ಮಪ್ರಸಾದ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!