25.1 C
ಪುತ್ತೂರು, ಬೆಳ್ತಂಗಡಿ
August 5, 2026
Uncategorizedಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

ಗೇರುಕಟ್ಟೆ: ಕಳಿಯ ಗ್ರಾಮದ ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ ಮಹಾಸಭೆಯು ನಡೆದು, ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಭಜನಾ ಮಂಡಳಿಯ ಅಧ್ಯಕ್ಷರಾದ ಸತೀಶ್ ಗೌಡ ಕುಳಾಯಿ ಇವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು.

ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜನಾರ್ದನ ಗೌಡ ಶುಭೋದಯ ಕುಳಾಯಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುಂದರ ನಾಯ್ಕ್ ಕುಳಾಯಿ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ನಂದೀಶ್ ಶೆಟ್ಟಿ ಹರ್ಮಾಡಿ , ಕಾರ್ಯದರ್ಶಿಯಾಗಿ ಕೇಶವ ಪೂಜಾರಿ ನೆಲ್ಲಿಕಟ್ಟೆ ಹಾಗೂ ಕೋಶಾಧಿಕಾರಿಯಾಗಿ ರವೀಂದ್ರ ಪೂಜಾರಿ ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಪ್ರಧಾನ ಅರ್ಚಕ ದರ್ಣಪ್ಪ ಪೂಜಾರಿ, ಕಳಿಯ ಗ್ರಾ. ಪಂ. ಮಾಜಿ ಅಧ್ಯಕ್ಷ ದಿವಾಕರ ಪೂಜಾರಿ ಮೆದಿನ, ಅಶೋಕ್ ಆಚಾರ್ಯ, ಶಿವರಾಮ್ ಗೌಡ ದಾಸರಬೆಟ್ಟು, ಹಿರಿಯರಾದ ದಾಮೋದರ್ ಶೆಟ್ಟಿ ಹರ್ಮಾಡಿ, ಸುಂದರ ಗೌಡ ಉಬರಡ್ಕ, ಶೇಖರ ಪೂಜಾರಿ ಹಾಗೂ ಭಜನಾ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ, ಅಕ್ಕಮ್ಮ ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya
error: Content is protected !!