May 6, 2026
Uncategorizedಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

ಗೇರುಕಟ್ಟೆ: ಕಳಿಯ ಗ್ರಾಮದ ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ ಮಹಾಸಭೆಯು ನಡೆದು, ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಭಜನಾ ಮಂಡಳಿಯ ಅಧ್ಯಕ್ಷರಾದ ಸತೀಶ್ ಗೌಡ ಕುಳಾಯಿ ಇವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು.

ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜನಾರ್ದನ ಗೌಡ ಶುಭೋದಯ ಕುಳಾಯಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುಂದರ ನಾಯ್ಕ್ ಕುಳಾಯಿ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ನಂದೀಶ್ ಶೆಟ್ಟಿ ಹರ್ಮಾಡಿ , ಕಾರ್ಯದರ್ಶಿಯಾಗಿ ಕೇಶವ ಪೂಜಾರಿ ನೆಲ್ಲಿಕಟ್ಟೆ ಹಾಗೂ ಕೋಶಾಧಿಕಾರಿಯಾಗಿ ರವೀಂದ್ರ ಪೂಜಾರಿ ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಪ್ರಧಾನ ಅರ್ಚಕ ದರ್ಣಪ್ಪ ಪೂಜಾರಿ, ಕಳಿಯ ಗ್ರಾ. ಪಂ. ಮಾಜಿ ಅಧ್ಯಕ್ಷ ದಿವಾಕರ ಪೂಜಾರಿ ಮೆದಿನ, ಅಶೋಕ್ ಆಚಾರ್ಯ, ಶಿವರಾಮ್ ಗೌಡ ದಾಸರಬೆಟ್ಟು, ಹಿರಿಯರಾದ ದಾಮೋದರ್ ಶೆಟ್ಟಿ ಹರ್ಮಾಡಿ, ಸುಂದರ ಗೌಡ ಉಬರಡ್ಕ, ಶೇಖರ ಪೂಜಾರಿ ಹಾಗೂ ಭಜನಾ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮಡಂತ್ಯಾರಿನ ಜಿ. ಬಾಲಕೃಷ್ಣ ಭಂಡಾರಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya
error: Content is protected !!