23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

ಬೆಳ್ತಂಗಡಿ: ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಪ್ರಯುಕ್ತ ಮಾ.೪ರಂದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಬೆಂಗಳೂರಿನ ಬಾಲವಾಗ್ಮಿ ಹಾರಿಕಾ ಮಂಜುನಾಥ್ ಧಾರ್ಮಿಕ ಉಪನ್ಯಾಸ ನೀಡಿದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್,ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಬೆಳ್ತಂಗಡಿ ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ, ಗುರುವಾಯನಕೆರೆ ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಶ್ರೀಕ್ಷೇತ್ರ  ಧ. ಗ್ರಾ. ಯೋ. ನಿವೃತ್ತ ಪ್ರಾದೇಶಿಕ ನಿದೇರ್ಶಕ ದುಗ್ಗೇ ಗೌಡ, ದ. ಕ. ಮತ್ತು. ಉಡುಪಿ ಜಿಲ್ಲಾ ಕಲ್ಲು ಗಣಿಗಾರಿಕಾ ಸಂಘ ಅಧ್ಯಕ್ಷ ಮನೋಜ್ ಶೆಟ್ಟಿ, ಬೆಳ್ತಂಗಡಿ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸೀತಾರಾಮ ಮಡಿವಾಳ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ  ರಾಧಕೃಷ್ಣ ರೖ ಬೂಡಿಯಾರ್, ಇಚ್ಚೂರು ಬಾಲಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಆರ್ಚಕ ಸುರೇಶ್ ಪುತ್ತುರಾಯ, ಮುಂಡೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಆನಂದ ಗೌಡ, ಆಡಳಿತ ಮಂಡಳಿ ಅಧ್ಯಕ್ಷ  ಸದಾನಂದ ಮೇಲಾಂಟ ಮೊಗರೋಡಿ ಹಾಗೂಜೀರ್ಣೋದ್ದಾರ ಸಮಿತಿ ಅಧ್ಯಕ್ಷ  ಶಿವಶಂಕರ್ ನಾಯಕ್ ಮಾರುತಿಪುರ ಉಪಸ್ಥಿತರಿದ್ದರು.

ವಿಲಾಸ್ ಪ್ರಾರ್ಥಿಸಿದರು. ಆಡಳಿತ ಮಂಡಳಿ ಕೋಶಾಧಿಕಾರಿ ರಕ್ಷಿತ್ ಶೆಟ್ಟಿ ಪಣೆಕ್ಕರ ಸ್ವಾಗತಿಸಿದರು.

ವೈಧಿಕ ಕಾರ್ಯಕ್ರಮಗಳು, ಭಜನೆ ಕಾರ್ಯಕ್ರಮಗಳು ನಡೆಯಿತು. ಮೈಸೂರು ರಾಮಚಂದ್ರ ಆಚಾರ್ ಅವರಿಂದ ದಾಸವಾಣಿ ಮತ್ತು ಭಕ್ತಿಗೀತೆ. ಮಂಗಳೂರು ಶ್ರೀ ಶಾರದಾ ಅಂಧರ ಗೀತ ಗಾಯನ ಕಲಾ ಸಂಘದಿAದ ಭಕ್ತಿ ರಸಮಂಜರಿ. ಕಣಿಯೂರು ಪಿಲಿಗೂಡು ಅಂಗನವಾಡಿ ಕೇಂದ್ರ ಪುಟಾಣಿಗಳಿಂದ ಚಿಣ್ಣರ ಚಿಲಿಪಿಲಿ, ಪಿಲಿಗೂಡು ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ, ಕಣಿಯೂರು ಕಸಬಾ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಗಮನ ಸೆಳೆಯಿತು.

Related posts

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya
error: Content is protected !!