July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನುಗ್ರಹ ಆಂ.ಮಾ. ಶಾಲೆಯಲ್ಲಿ ದೀಪ ಪ್ರದಾನ ಕಾರ್ಯಕ್ರಮ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯ ಅಂಗವಾಗಿ ದೀಪ ಪ್ರದಾನ ಕಾರ್ಯಕ್ರಮವು ಶಾಲಾ ಸಭಾಭವನದಲ್ಲಿ ಮಾ.4ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಫಾ. ಅಬೆಲ್ ಲೋಬೊ ವಹಿಸಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.

ಪ್ರಾಂಶುಪಾಲ ಫಾ. ವಿಜಯ್ ಲೋಬೊ ಮಾತನಾಡಿ ಕುಟುಂಬದೊAದಿಗೆ ಒಗ್ಗಟ್ಟಾಗಿ ಬದುಕಬೇಕು; ಆದರೆ ಸಂಕಷ್ಟಗಳು ಬಂದಾಗ ಧೈರ್ಯದಿಂದ ಒಬ್ಬಂಟಿಯಾಗಿ ಎದುರಿಸುವ ಮನೋಬಲ ಹೊಂದಿರಬೇಕು ಎಂಬ ಸಂದೇಶವನ್ನು ನೀಡಿದರು. ವಿದ್ಯಾರ್ಥಿಗಳು ಜಗತ್ತಿನ ಬೆಳಕಾಗುವಂತೆ ದೀಪ ಪ್ರಧಾನ ಮಾಡಲಾಯಿತು.

ವಿದ್ಯಾರ್ಥಿನಿ ಜಾಹ್ನವಿ ಎಲ್ಲಾ ಕಿರಿಯ ವಿದ್ಯಾರ್ಥಿಗಳ ಪರವಾಗಿ ಶುಭ ಹಾರೈಸಿದರು. ಕಿರಿಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮನೋರಂಜನಾ ಕ್ರೀಡೆಗಳನ್ನು ನಡೆಸಿಕೊಟ್ಟರು. ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಂಸ್ಥೆಗೆ 10ನೇ ತರಗತಿಯ ವಿದ್ಯಾರ್ಥಿಗಳು ಲ್ಯಾಪ್‌ಟಾಪ್ ಅನ್ನು ಕಾಣಿಕೆಯಾಗಿ ನೀಡಿದರು.ಸ್ನೇಹಲ್ ಅಡ್ಲಿನ್ ಡಿ’ಸೋಜ ನಿರೂಪಿಸಿದರು. ಗಗನ್ ಡಿ ಸ್ವಾಗತಿಸಿ, ಪಂಚಮ್ ವಂದಿಸಿದರು. ಸಹಶಿಕ್ಷಕ ಗಣೇಶ್ ಹಾಗೂ ಸಹಶಿಕ್ಷಕಿ ಮೇರಿ ಟಿ.ಎಂ ಮಾರ್ಗದರ್ಶನ ನೀಡಿದರು.

Related posts

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ಗುರುವಾಯನಕೆರೆ ವೈಭವ್ ಹಾರ್ಡ್ ವೇರ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya
error: Content is protected !!