37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಅಲೆಂಜಿಕಟ್ಟ ಎಂಬಲ್ಲಿ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಮಾಡಿ ಸಾಗಾಟ ಮಾಡಲು ಲಾರಿಗೆ ತುಂಬಿಸುತ್ತಿರುವ ಬಗ್ಗೆ ಮಾ.4 ರಂದು ಸಂಜೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಚರ್ಚ್ ಗುಡ್ಡೆ ನಿವಾಸಿ ನಿಜಾಮುದ್ದೀನ್(47) ಮತ್ತು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ನಿವಾಸಿ ಹನೀಫ್(44) ಎಂಬವರು KA-53-A-9796 ನಂಬರಿನ ಟಿಪ್ಪರ್ ಲಾರಿಯಲ್ಲಿ ಯಾವುದೇ ಸರಕಾರದ ಅನುಮತಿ ಇಲ್ಲದೆ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸುತ್ತಿದ್ದರು.

ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳದಿಂದ 3 ಲಕ್ಷದ 50 ರೂಪಾಯಿ ಮೌಲ್ಯದ ಒಂದು ಲಾರಿ, 6,500 ರೂಪಾಯಿ ಮೌಲ್ಯದ ಮರಳು,ಮರಳನ್ನು ಲಾರಿಗೆ ತುಂಬಿಸಲು ಉಪಯೋಗಿಸಿದ 150 ರೂಪಾಯಿ ಮೌಲ್ಯದ ಪ್ರೈಬರ್ ಬುಟ್ಟಿಗಳು 3 , 100 ರೂಪಾಯಿ ಮೌಲ್ಯದ ಹಾರೆ 1, 50 ರೂಪಾಯಿ ಮೌಲ್ಯದ ಕಬ್ಬಿಣದ ಬಕೆಟ್ 1, 2,500 ರೂಪಾಯಿ ಮೌಲ್ಯದ ಕಬ್ಬಿಣದ ಮೆಟ್ಟಿಲುಗಳನ್ನು ವಶಪಡಿಸಿಕೊಂಡಿದ್ದಾರೆ.

ಇಬ್ಬರು ಆರೋಪಿಗಳಾದ ನಿಜಾಮುದ್ದೀನ್ ಮತ್ತು ಹನೀಫ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಕುಶಾಲಪ್ಪ ನಾಯ್ಕ್ ಅವರು ಮಾ.4 ರಂದು ನೀಡಿದ ದೂರಿನ ಮೇರೆಗೆ BNS -2023 (u/s-303(2),r/w3(5)),MMDR Act 1957(u/s-4(1),4(1A),21(1)(1A),KMMCR-1994(u/s-42,43,44) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya
error: Content is protected !!