ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಅಲೆಂಜಿಕಟ್ಟ ಎಂಬಲ್ಲಿ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಮಾಡಿ ಸಾಗಾಟ ಮಾಡಲು ಲಾರಿಗೆ ತುಂಬಿಸುತ್ತಿರುವ ಬಗ್ಗೆ ಮಾ.4 ರಂದು ಸಂಜೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಚರ್ಚ್ ಗುಡ್ಡೆ ನಿವಾಸಿ ನಿಜಾಮುದ್ದೀನ್(47) ಮತ್ತು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ನಿವಾಸಿ ಹನೀಫ್(44) ಎಂಬವರು KA-53-A-9796 ನಂಬರಿನ ಟಿಪ್ಪರ್ ಲಾರಿಯಲ್ಲಿ ಯಾವುದೇ ಸರಕಾರದ ಅನುಮತಿ ಇಲ್ಲದೆ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸುತ್ತಿದ್ದರು.

ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳದಿಂದ 3 ಲಕ್ಷದ 50 ರೂಪಾಯಿ ಮೌಲ್ಯದ ಒಂದು ಲಾರಿ, 6,500 ರೂಪಾಯಿ ಮೌಲ್ಯದ ಮರಳು,ಮರಳನ್ನು ಲಾರಿಗೆ ತುಂಬಿಸಲು ಉಪಯೋಗಿಸಿದ 150 ರೂಪಾಯಿ ಮೌಲ್ಯದ ಪ್ರೈಬರ್ ಬುಟ್ಟಿಗಳು 3 , 100 ರೂಪಾಯಿ ಮೌಲ್ಯದ ಹಾರೆ 1, 50 ರೂಪಾಯಿ ಮೌಲ್ಯದ ಕಬ್ಬಿಣದ ಬಕೆಟ್ 1, 2,500 ರೂಪಾಯಿ ಮೌಲ್ಯದ ಕಬ್ಬಿಣದ ಮೆಟ್ಟಿಲುಗಳನ್ನು ವಶಪಡಿಸಿಕೊಂಡಿದ್ದಾರೆ.

ಇಬ್ಬರು ಆರೋಪಿಗಳಾದ ನಿಜಾಮುದ್ದೀನ್ ಮತ್ತು ಹನೀಫ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಕುಶಾಲಪ್ಪ ನಾಯ್ಕ್ ಅವರು ಮಾ.4 ರಂದು ನೀಡಿದ ದೂರಿನ ಮೇರೆಗೆ BNS -2023 (u/s-303(2),r/w3(5)),MMDR Act 1957(u/s-4(1),4(1A),21(1)(1A),KMMCR-1994(u/s-42,43,44) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪಟ್ರಮೆ: ಲಕ್ಷ್ಮಣ ಗೌಡ ನಿಧನ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಶಿಶಿಲ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ ಧಾರ್ಮಿಕ ಸಭೆ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ನಿಕಟ ಪೂರ್ವ ರಾಜಾಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿಯ ಶ್ರೀ ರಾಮಸ್ವಾಮಿ(ವಿಸಿಎನ್ಆರ್ ಗ್ರೂಪ್) ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya
error: Content is protected !!