ಬೆಳ್ತಂಗಡಿ: ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ-2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಪ್ರಗತಿಪರ ಸಾವಯವ ಕೃಷಿಕ ಬೆಳ್ತಂಗಡಿ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಮಾ.3ರಂದು ಬೆಂಗಳೂರು ನಲ್ಲಿ ಕಂದಾಯ ಸಚಿವ ಕೃಷ್ಣಬೈರೇ ಗೌಡರವರು ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ನ್ಯೂಸ್ 18 ಕನ್ನಡ ಸಂಪಾದಕ ಹರಿಪ್ರಸಾದ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು, ಸಿನಿಮಾ ತಾರೆಯರು, ಸಾಧಕರು ಉಪಸ್ಥಿತರಿದ್ದರು.
ಅಡಿಕೆ, ತೆಂಗು, ಕಾಳು ಮೆಣಸು, ಹಣ್ಣು ಹಂಪಲು, ಮೀನುಗಾರಿಕೆ, ಕೋಳಿಸಾಕಣೆ, ಹೈನುಗಾರಿಕೆ ಹಾಗೂ ವಿವಿಧ ರೀತಿಯ ಪ್ರಾಣಿ ಪಕ್ಷಿಗಳ ಸಾಕಣೆಯ ಜೊತೆಗೆ ಸುಸ್ಥಿರ ಮಾದರಿಯಲ್ಲಿ ಬೆಳೆಸುವ ಮಾದರಿ ಕೃಷಿಕರಾಗಿ ಸಮಗ್ರ ಕೃಷಿಯಲ್ಲಿ ಗುರುತಿಸಿಕೊಂಡಿದ್ದಾರೆ. ತಾಯಿ ಕುಸುಮ, ಪತ್ನಿ, ಮಕ್ಕಳು, ಸಹೋದರ ದಂಪತಿಗಳು ಇವರೆಲ್ಲರೂ ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿರುತ್ತಾರೆ.











