37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹೆದ್ದಾರಿಯ ಅಗಲೀಕರಣ ಪರಿಹಾರಧನ ಪಡೆದಮನೆ, ಕಟ್ಟಡಗಳ ತೆರಿಗೆ ರದ್ದು ಪಡಿಸಲು ಸೂಚನೆ

ಬೆಳ್ತಂಗಡಿ: ರಾಷ್ಟ್ರೀಯ, ರಾಜ್ಯ ಹೆದ್ದಾರಿಯ ಅಗಲೀಕರಣದ ಸಂದರ್ಭದಲ್ಲಿ ರಸ್ತೆ ಅಗಲೀಕರಣಕ್ಕಾಗಿ ಪರಿಹಾರಧನ ಪಡೆದುಕೊಂಡ ಮನೆ,ಕಟ್ಟಡಗಳ ಮಾಲೀಕರ, ಅನುಭೋಗದಾರರ ಮನೆ,ಕಟ್ಟಡಗಳ ಆಸ್ತಿ ಹಾಗೂ ಆಸ್ತಿಗಳ ಕದ ನಂಬ್ರ, ಕಟ್ಟಡ ತೆರಿಗೆ ಹಾಗೂ ಆಸ್ತಿ ಸಂಖ್ಯೆಯನ್ನು ರದ್ದುಪಡಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯತೆಯಿಂದ ನಿಯಮಾವಳಿಯಂತೆ ಕ್ರಮ ವಹಿಸಲು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಪಂಚಾಯತುಗಳ ಅಭಿವೃದ್ಧಿಗಳಿಗೆ ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳು ಆದೇಶ ಮಾಡಿದ್ದಾರೆ.

ಪೂಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಅಗಲೀಕರಣ ಕಾಮಗಾರಿ ಕೆಲಸಗಳು ನಡೆಯುತ್ತಿದ್ದು, ಸದರಿ ಕಾಮಗಾರಿ ಮಾಡಲು ವಾಸ್ತವ್ಯ ಮತ್ತು ವಾಣಿಜ್ಯ ಸೇರಿದಂತೆ ಹಲವು ಕಟ್ಟಡಗಳನ್ನು ತೆರವು ಮಾಡಲು ಪರಿಹಾರ ಧನ ಪಡೆದುಕೊಂಡ ಬಹುತೇಕ ವಾಣಿಜ್ಯ ಕಟ್ಟಡ, ಮನೆಗಳ ಮಾಲೀಕರು ಕಾನೂನು ಬಾಹಿರವಾಗಿ ಸ್ಥಳೀಯ ಗ್ರಾಮ ಪಂಚಾಯತಿನಿಂದ ಮನೆ, ಕಟ್ಟಡ ರಚನೆ, ದುರಸ್ಥಿ, ಸೇರ್ಪಡೆ, ನವೀಕರಣ, ವಿಸ್ತರಣೆ ಮಾಡುವ ಬಗ್ಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಂಡು ಕಾಮಗಾರಿ ಕೆಲಸ ಮಾಡುತ್ತಿದ್ದಾರೆ. ಆದರೆ ಕಾನೂನು ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದಿಂದ ಪರಿಹಾರದ ಹಣ ಪಡೆದುಕೊಂಡ ಮಾಲೀಕರಿಗೆ ಅನುಮೋದನೆ ನೀಡಬಾರದು ಹಾಗೂ ಮನೆ, ವಾಣಿಜ್ಯ ಕಟ್ಟಡಗಳ ಕದ ನಂಬರ್, ಕಟ್ಟಡ ತೆರಿಗೆ, ಆಸ್ತಿ ಸಂಖ್ಯೆಯನ್ನು ರದ್ದುಪಡಿಸಿ ಅಕ್ರಮ ಕಟ್ಟಡಗಳ ಕಾಮಗಾರಿಗಳನ್ನು ಕೂಡಲೇ ಸ್ಥಗಿತಗೊಳಿಸಬೇಕಾಗಿ ಪ್ರತೀಕ್ ಅಂಕಾಜೆ ಇವರು ಮನವಿ ಮಾಡಿದ್ದು, ಇದರ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಉಜಿರೆ, ಕುವೆಟ್ಟು, ಮಡಂತ್ಯಾರು, ಧರ್ಮಸ್ಥಳ, ಚಾರ್ಮಾಡಿ, ನಿಡ್ಲೆ, ಕೊಕ್ಕಡ, ಬಳಂಜ, ಅಳದಂಗಡಿ, ಸುಲ್ಕೇರಿ ಮತ್ತು ನಾರಾವಿಎ ಪಂಚಾಯತುಗಳಿಗೆ ಕಳುಹಿಸಿದ ಆದೇಶದಲ್ಲಿ ಸೂಚಿಸಲಾಗಿದೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ – ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ ಪುನರಾಯ್ಕೆ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ನ.1:ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ‘ಜೈ ಭಜರಂಗ ಬಲಿ’ ನಾಟಕ ಮತ್ತೊಮ್ಮೆ ಪ್ರದರ್ಶನ

Suddi Udaya
error: Content is protected !!