25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹೆದ್ದಾರಿಯ ಅಗಲೀಕರಣ ಪರಿಹಾರಧನ ಪಡೆದಮನೆ, ಕಟ್ಟಡಗಳ ತೆರಿಗೆ ರದ್ದು ಪಡಿಸಲು ಸೂಚನೆ

ಬೆಳ್ತಂಗಡಿ: ರಾಷ್ಟ್ರೀಯ, ರಾಜ್ಯ ಹೆದ್ದಾರಿಯ ಅಗಲೀಕರಣದ ಸಂದರ್ಭದಲ್ಲಿ ರಸ್ತೆ ಅಗಲೀಕರಣಕ್ಕಾಗಿ ಪರಿಹಾರಧನ ಪಡೆದುಕೊಂಡ ಮನೆ,ಕಟ್ಟಡಗಳ ಮಾಲೀಕರ, ಅನುಭೋಗದಾರರ ಮನೆ,ಕಟ್ಟಡಗಳ ಆಸ್ತಿ ಹಾಗೂ ಆಸ್ತಿಗಳ ಕದ ನಂಬ್ರ, ಕಟ್ಟಡ ತೆರಿಗೆ ಹಾಗೂ ಆಸ್ತಿ ಸಂಖ್ಯೆಯನ್ನು ರದ್ದುಪಡಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯತೆಯಿಂದ ನಿಯಮಾವಳಿಯಂತೆ ಕ್ರಮ ವಹಿಸಲು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಪಂಚಾಯತುಗಳ ಅಭಿವೃದ್ಧಿಗಳಿಗೆ ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳು ಆದೇಶ ಮಾಡಿದ್ದಾರೆ.

ಪೂಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಅಗಲೀಕರಣ ಕಾಮಗಾರಿ ಕೆಲಸಗಳು ನಡೆಯುತ್ತಿದ್ದು, ಸದರಿ ಕಾಮಗಾರಿ ಮಾಡಲು ವಾಸ್ತವ್ಯ ಮತ್ತು ವಾಣಿಜ್ಯ ಸೇರಿದಂತೆ ಹಲವು ಕಟ್ಟಡಗಳನ್ನು ತೆರವು ಮಾಡಲು ಪರಿಹಾರ ಧನ ಪಡೆದುಕೊಂಡ ಬಹುತೇಕ ವಾಣಿಜ್ಯ ಕಟ್ಟಡ, ಮನೆಗಳ ಮಾಲೀಕರು ಕಾನೂನು ಬಾಹಿರವಾಗಿ ಸ್ಥಳೀಯ ಗ್ರಾಮ ಪಂಚಾಯತಿನಿಂದ ಮನೆ, ಕಟ್ಟಡ ರಚನೆ, ದುರಸ್ಥಿ, ಸೇರ್ಪಡೆ, ನವೀಕರಣ, ವಿಸ್ತರಣೆ ಮಾಡುವ ಬಗ್ಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಂಡು ಕಾಮಗಾರಿ ಕೆಲಸ ಮಾಡುತ್ತಿದ್ದಾರೆ. ಆದರೆ ಕಾನೂನು ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದಿಂದ ಪರಿಹಾರದ ಹಣ ಪಡೆದುಕೊಂಡ ಮಾಲೀಕರಿಗೆ ಅನುಮೋದನೆ ನೀಡಬಾರದು ಹಾಗೂ ಮನೆ, ವಾಣಿಜ್ಯ ಕಟ್ಟಡಗಳ ಕದ ನಂಬರ್, ಕಟ್ಟಡ ತೆರಿಗೆ, ಆಸ್ತಿ ಸಂಖ್ಯೆಯನ್ನು ರದ್ದುಪಡಿಸಿ ಅಕ್ರಮ ಕಟ್ಟಡಗಳ ಕಾಮಗಾರಿಗಳನ್ನು ಕೂಡಲೇ ಸ್ಥಗಿತಗೊಳಿಸಬೇಕಾಗಿ ಪ್ರತೀಕ್ ಅಂಕಾಜೆ ಇವರು ಮನವಿ ಮಾಡಿದ್ದು, ಇದರ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಉಜಿರೆ, ಕುವೆಟ್ಟು, ಮಡಂತ್ಯಾರು, ಧರ್ಮಸ್ಥಳ, ಚಾರ್ಮಾಡಿ, ನಿಡ್ಲೆ, ಕೊಕ್ಕಡ, ಬಳಂಜ, ಅಳದಂಗಡಿ, ಸುಲ್ಕೇರಿ ಮತ್ತು ನಾರಾವಿಎ ಪಂಚಾಯತುಗಳಿಗೆ ಕಳುಹಿಸಿದ ಆದೇಶದಲ್ಲಿ ಸೂಚಿಸಲಾಗಿದೆ.

Related posts

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya
error: Content is protected !!