22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಸರ್ವಿಸ್ ರಸ್ತೆಯ ಬದಲಿಗೆ ಡ್ಯೂಯೆಲ್ ಕಾರೇಜ್ ನೊಂದಿಗೆ ರಸ್ತೆಯನ್ನು ಅಗಲಗೊಳಿಸಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಗೆ ಬೆಳ್ತಂಗಡಿ ವರ್ತಕರ ಸಂಘದಿಂದ ಮನವಿ

ಬೆಳ್ತಂಗಡಿ: ಬೆಳ್ತಂಗಡಿಯ ವರ್ತಕರು ಒಟ್ಟು ಸೇರಿ ಸಂತೆಕಟ್ಟೆಯ ಅಯ್ಯಪ್ಪ ದೇವಸ್ಥಾನದ ಎದುರುಗಡೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಪಟ್ಟಣದಲ್ಲಿ ಹಾದು ಹೋಗುವ ಸರ್ವಿಸ್ ರಸ್ತೆಯಿಂದಾಗುವ ತೊಂದರೆಗಳನ್ನು ವ್ಯಕ್ತಪಡಿಸಿದರು.

ಬೆಳ್ತಂಗಡಿ ಪಟ್ಟಣ ವ್ಯಾಪ್ತಿಯಲ್ಲಿ ಸರ್ವಿಸ್ ರಸ್ತೆ ನಿರ್ಮಾಣದಿಂದ ಹಾಗೂ ಒಳ ಚರಂಡಿಯ ಅವೈಜ್ಞಾನಿಕ ನಿರ್ಮಾಣವು ವಾಹನಗಳ ಓವರ್ ಟೇಕಿಂಗ್ ಮತ್ತು ವೇಗದಿಂದ ಹಲವಾರು ರಸ್ತೆ ಆಪಘಾತಗಳು ಸಂಭವಿಸುತ್ತವೆ ಹಾಗೂ ಪಟ್ಟಣದ ೧೦೦ಕ್ಕೂ ಅಧಿಕ ವ್ಯಾಪಾರಿ ಸಮುದಾಯಕ್ಕೆ ಬಹಳಷ್ಟು ಕಷ್ಟ ನಷ್ಟವನ್ನು ಉಂಟಾಗುವ ಪರಿಸ್ಥಿತಿಯನ್ನು ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೋಬೋ ಉಸ್ತುವಾರಿ ಸಚಿವರಿಗೆ ತಿಳಿಸಿದರು.

ಈ ಮೊದಲೇ ಇಲ್ಲಿನ ರಸ್ತೆಯ ಬಗ್ಗೆ ಮನವಿಯನ್ನು ಕೊಟ್ಟಿದ್ದೇವೆ. ಆದರೂ ರಸ್ತೆ ಹಾಗೂ ರಸ್ತೆಯ ಮದ್ಯದಲ್ಲಿ ಚರಂಡಿ ಕೆಲಸ ನಡೆಯುತ್ತಾ ಇದೆ. ರಸ್ತೆ ಹಾಗೂ ಚರಂಡಿ ಕೆಲಸ ಸಂಪೂರ್ಣಗೊಂಡ ಸ್ಥಳದಲ್ಲಿ ಹಲವಾರು ಅಪಘಾತಗಳು ಹಾಗೂ ಟ್ರಾಫಿಕ್ ಜಾಮ್ ಶಾಲೆ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ರಸ್ತೆ ದಾಟಲು ಸಮಸ್ಯೆ ಆಗುತ್ತದೆ. ಈಗಾಗಲೇ ಹಲವಾರು ಅಂಗಡಿಗಳು ಮುಚ್ಚಲಾಗಿವೆ. ಆದ್ದರಿಂದ ತಾವು ದಯವಿಟ್ಟು ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಸರ್ವಿಸ್ ರಸ್ತೆಯನ್ನು ರದ್ದು ಮಾಡಿ ಇದ್ದ ಏಕ ರಸ್ತೆಯ ಬದಲಿಗೆ ಡ್ಯೂಯೆಲ್ ಕಾರೇಜ್‌ನೊಂದಿಗೆ ರಸ್ತೆಯನ್ನು ಅಗಲಗೊಳಿಸಿ ಮದ್ಯದಲ್ಲಿ ವಿಭಜಕವನ್ನು ಅಳವಡಿಸಿ ರಸ್ತೆಯ ಎರಡು ಬದಿಯಲ್ಲಿ ಒಳಚರಂಡಿಯನ್ನು ನಿರ್ಮಾಣ ಮಾಡುವಂತೆ ಸಚಿವರಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ವರ್ತಕ ಸಂಘದ ಅಧ್ಯಕ್ಷ ರೋನಾಲ್ಡ್ ಲೋಬೊ, ಉಪಾಧ್ಯಕ್ಷ ಶಶಿಧರ್ ಪೈ, ಕಾರ್ಯದರ್ಶಿ ಲಾನ್ಸಿ ಪಿರೇರ, ಉಪ ಕಾರ್ಯದರ್ಶಿ ಯಶವಂತ್ ಪಟವರ್ಧನ್, ಖಜಾಂಚಿ ಸುನೀಲ್ ಶೆನೋಯ್, ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ, ಸಮಿತಿ ಸದಸ್ಯರಾದ ಜೂಡ್ ಲೋಬೊ, ವಿನ್ಸೆಂಟ್ ಡಿಸೋಜ, ಶೀತಲ್ ಜೈನ್, ಅರಿಹಂತ್ ಜೈನ್, ವಿಲ್ಸನ್ ಗೊನ್ಸಾಲ್ವಿಸ್, ಸೀತಾರಾಮ ಶೆಟ್ಟಿ, ಜೈಸನ್ ಡಿಸೋಜಾ ಹಾಗೂ ವರ್ತಕರು ಉಪಸ್ಥಿತರಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಹಳ್ಳಿಮನೆ ಪ್ರವೀಣ್ ಫೆರ್ನಾಂಡಿಸ್ ಜೊತೆಗಿದ್ದರು.

Related posts

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya
error: Content is protected !!