22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

ಉಜಿರೆ: ಅಗಸ್ಯ ಇಂಟರ್‌ನ್ಯಾಷನಲ್ ಫೌಂಡೇಶನ್ ಹಾಗೂ ಬೆಂಗಳೂರಿನ ಸಿನೋಪ್ಪಿಸ್ ಸಂಸ್ಥೆಯ ಆಶ್ರಯದಲ್ಲಿ ಇತ್ತೀಚೆಗೆ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಅನ್ವೇಷಣಾ-2026 ಪ್ರಾಜೆಕ್ಟ್ ಚಾಂಪಿಯನ್‌ಶಿಪ್‌ನಲ್ಲಿ ಸಕ್ರೀಯವಾಗಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಉಜಿರೆಯ ಎಸ್.ಡಿ.ಎಂ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.


ಅನ್ವೇಷಣಾ-2026 ಪ್ರಾಜೆಕ್ಟ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ವಿವಿಧ ಇಂಜಿನಿಯರಿAಗ್ ಕಾಲೇಜು ಗಳಿಂದ ಸುಮಾರು ೬೦೦ಕ್ಕೂ ಹೆಚ್ಚು ನವೀನ ತಾಂತ್ರಿಕ ಪ್ರಾಜೆಕ್ಟ್ ಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅವುಗಳಲ್ಲಿ ೪೫ ತಂಡಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಈ ನಡುವೆ ಉಜಿರೆಯ ಎಸ್.ಡಿ.ಎಂ ಸಂಸ್ಥೆಯ ವಿದ್ಯಾರ್ಥಿಗಳು ತಯಾರಿಸಿದ ಪ್ರಾಜೆಕ್ಟ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿ ಪ್ರಶಸ್ತಿಗೆ ಆಯ್ಕೆಯಾಗಿದ್ದು ವಿಶೇಷವಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿಯೊಂದಿಗೆ 8000 ನಗದು ಬಹುಮಾನವನ್ನು ನೀಡಿ ಗೌರವಿಸಿದೆ.

ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಾಹನಾ ಬೋಗಾರ್, ಚಂದನಾ, ಅಖಿಲೇಶ್ ಹಾಗು ಉಜಿರೆಯ ಎಸ್.ಡಿ.ಎಂ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಾದ ಕಾರ್ತಿಕ್, ರಾಕೇಶ್ ಡಿ.ಆರ್ ಭಾಗವಹಿಸಿದ್ದರು. ಇವರಿಗೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಪದ್ಮ ಪ್ರಸಾದ ಮಾರ್ಗದರ್ಶನ ನೀಡಿರುತ್ತಾರೆ.

ಈ ಸಾಧನೆ ಉಜಿರೆಯ ಎಸ್.ಡಿ.ಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಗರಿಮೆಯನ್ನು ಹೆಚ್ಚಿದ್ದು, ಶೈಕ್ಷಣಿಕ ಶ್ರೇಷ್ಠತೆ ಹಾಗೂ ಪ್ರಾಯೋಗಿಕ ನವೀನತೆಗೆ ಸಂಸ್ಥೆಯ ಬದ್ಧತೆಯನ್ನು ಪ್ರತಿಬಿಂಬಿಸಿದೆ.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya
error: Content is protected !!