23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

ಕಡಿರುದ್ಯಾವರ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಮಾ.5ರಂದು ಗ್ರಾ.ಪಂ. ಆಡಳಿತ ಅಧಿಕಾರಿ ಶರ್ಮಿಷ್ಠ ರವರ ಅಧ್ಯಕ್ಷತೆಯಲ್ಲಿ ಸ್ವಾಮಿ ವಿವೇಕಾನಂದ ಸಭಾ ಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಮಿತ್ತಬಾಗಿಲು ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗೋಪಾಲ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಮೆಸ್ಕಾಂ, ಕಂದಾಯ, ಪಶು ಸಂಗೋಪನೆ, ಶಿಕ್ಷಣ, ಅರಣ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ, ಅಬಕಾರಿ ಇಲಾಖೆಯ ಅಧಿಕಾರಿಗಳು ಮಾಹಿತಿಯನ್ನು ನೀಡಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರತ್ನಾವತಿ, ಮಾಜಿ ಸದಸ್ಯ ಅಶೋಕ್, ಸುರೇಶ್ ಕೌಡಂಗೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂಚಾಯತ್ ಕಾರ್ಯದರ್ಶಿ ಜನಾರ್ದನ ಅನುಪಾಲನಾ ವರದಿ ವಾಚಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ್ರ ಸ್ವಾಗತಿಸಿ, ವಂದಿಸಿದರು. ವಿತೇಶ್ ಕೋಟ್ಯಾನ್ ಜಮಾ ಖರ್ಚು ವಿವರ ಮಂಡಿಸಿದರು

Related posts

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya
error: Content is protected !!