25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವ-2026: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರಿನಲ್ಲಿ ಸಹಕಾರಿ ಭಾರತಿ ವತಿಯಿಂದ ನಡೆದ ಸಹಕಾರಿ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಗಳಿಗಾಗಿ ನಡೆದ ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವದಲ್ಲಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಸದಸ್ಯರು ಮತ್ತು ಸಿಬ್ಬಂದಿಗಳು ಭಾಗವಹಿಸಿದರು.

ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವದ 100 ಮೀಟರ್ ಓಟದಲ್ಲಿ ಅಳದಂಗಡಿ ಸಿಎ ಬ್ಯಾಂಕಿನ ಅಧ್ಯಕ್ಷರಾದ ರಾಕೇಶ್ ಹೆಗ್ಡೆ ಇವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕ್ರಿಕೆಟ್ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನವನ್ನು ಅಲಂಕರಿಸಿದ್ದಾರೆ ಹಾಗೂ ವಿವಿಧ ಕ್ರೀಡಾಕೂಟದಲ್ಲಿ ಸಂಘದ ಪದಾಧಿಕಾರಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಸಂಘವು ಪಡೆದುಕೊಂಡಿತು.

ಈ ಸಂದರ್ಭದಲ್ಲಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಉಪಾಧ್ಯಕ್ಷ ಜನಾರ್ದನ ಪೂಜಾರಿ, ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ, ದಿನೇಶ್ ಪಿ.ಕೆ, ಸಿಬ್ಬಂದಿಗಳಾದ ಸತೀಶ್ ಕೆ, ಯತೀಶ್ ಬಳಂಜ, ಪ್ರವೀಣ್ ತೋಟದಪಲ್ಕೆ, ಕಿರಣ್ ಪಿಲ್ಯ, ಸಂತೋಷ್ ಅಳದಂಗಡಿ, ದಿನೇಶ್ ಕುದ್ಯಾಡಿ, ಡಿಕಯ್ಯ ಕುಲಾಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya
error: Content is protected !!