24.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

ಬೆಳಾಲು: ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮಾ.4 ರಂದು ಬೆಳಾಲು ಗ್ರಾಮದ ಕೀನ್ಯಾಜೆ ಎಂಬಲ್ಲಿ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟವಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್‌ ಗಾಣಿಗೇರವರು ನೇತೃತ್ವದ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಹಣವನ್ನು ಪಣವಾಗಿಟ್ಟುಕೊಂಡು ಹಿಂಸಾತ್ಮಕವಾಗಿ ಕೊಳಿ ಅಂಕ ಜೂಜಾಟ ನಡೆಯುತ್ತಿದ್ದಾಗ ಸ್ಥಳದಲ್ಲಿದ್ದ 7 ಜನರನ್ನು ಹಿಡಿದು ವಿಚಾರಿಸಲಾಗಿ ಕೃಷ್ಣಪ್ಪ ಗೌಡ(60), ರಾಜಪ್ಪ ಗೌಡ(55), ಪ್ರಕಾಶ್(40), ಚಂದಪ್ಪ (45), ಜಯಾನಂದ(38), ರಾಮಣ್ಣ ಗೌಡ(50), ಲಕ್ಷ್ಮಣ ಗೌಡ(45) ಎಂಬವರಾಗಿದ್ದು ಉಳಿದವರು ದಾಳಿ ವೇಳೆ ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳದಲ್ಲಿದ್ದ 5 ಕೋಳಿಗಳನ್ನು ಮತ್ತು ಕೋಳಿಗಳ ಕಾಲಿಗೆ ಕಟ್ಟುವ ಬಾಲುಗಳು(ಸಣ್ಣಕತ್ತಿ) 2 ಹಾಗೂ ನಗದು 970 ರೂಪಾಯಿ ವಶಪಡಿಸಿಕೊಳ್ಳಲಾಗಿದೆ.ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಕಲಂ: 87 KP Act AND ಕಲಂ 11(1)(m)(ii), 11(1)(n), . prevention of animals cruelty Act -1960ರಂತೆ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಕಣಿಯೂರು ದೀಪಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya
error: Content is protected !!