23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹೆದ್ದಾರಿಯ ಅಗಲೀಕರಣ ಪರಿಹಾರಧನ ಪಡೆದಮನೆ, ಕಟ್ಟಡಗಳ ತೆರಿಗೆ ರದ್ದು ಪಡಿಸಲು ಸೂಚನೆ

ಬೆಳ್ತಂಗಡಿ: ರಾಷ್ಟ್ರೀಯ, ರಾಜ್ಯ ಹೆದ್ದಾರಿಯ ಅಗಲೀಕರಣದ ಸಂದರ್ಭದಲ್ಲಿ ರಸ್ತೆ ಅಗಲೀಕರಣಕ್ಕಾಗಿ ಪರಿಹಾರಧನ ಪಡೆದುಕೊಂಡ ಮನೆ,ಕಟ್ಟಡಗಳ ಮಾಲೀಕರ, ಅನುಭೋಗದಾರರ ಮನೆ,ಕಟ್ಟಡಗಳ ಆಸ್ತಿ ಹಾಗೂ ಆಸ್ತಿಗಳ ಕದ ನಂಬ್ರ, ಕಟ್ಟಡ ತೆರಿಗೆ ಹಾಗೂ ಆಸ್ತಿ ಸಂಖ್ಯೆಯನ್ನು ರದ್ದುಪಡಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯತೆಯಿಂದ ನಿಯಮಾವಳಿಯಂತೆ ಕ್ರಮ ವಹಿಸಲು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಪಂಚಾಯತುಗಳ ಅಭಿವೃದ್ಧಿಗಳಿಗೆ ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳು ಆದೇಶ ಮಾಡಿದ್ದಾರೆ.

ಪೂಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಅಗಲೀಕರಣ ಕಾಮಗಾರಿ ಕೆಲಸಗಳು ನಡೆಯುತ್ತಿದ್ದು, ಸದರಿ ಕಾಮಗಾರಿ ಮಾಡಲು ವಾಸ್ತವ್ಯ ಮತ್ತು ವಾಣಿಜ್ಯ ಸೇರಿದಂತೆ ಹಲವು ಕಟ್ಟಡಗಳನ್ನು ತೆರವು ಮಾಡಲು ಪರಿಹಾರ ಧನ ಪಡೆದುಕೊಂಡ ಬಹುತೇಕ ವಾಣಿಜ್ಯ ಕಟ್ಟಡ, ಮನೆಗಳ ಮಾಲೀಕರು ಕಾನೂನು ಬಾಹಿರವಾಗಿ ಸ್ಥಳೀಯ ಗ್ರಾಮ ಪಂಚಾಯತಿನಿಂದ ಮನೆ, ಕಟ್ಟಡ ರಚನೆ, ದುರಸ್ಥಿ, ಸೇರ್ಪಡೆ, ನವೀಕರಣ, ವಿಸ್ತರಣೆ ಮಾಡುವ ಬಗ್ಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಂಡು ಕಾಮಗಾರಿ ಕೆಲಸ ಮಾಡುತ್ತಿದ್ದಾರೆ. ಆದರೆ ಕಾನೂನು ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದಿಂದ ಪರಿಹಾರದ ಹಣ ಪಡೆದುಕೊಂಡ ಮಾಲೀಕರಿಗೆ ಅನುಮೋದನೆ ನೀಡಬಾರದು ಹಾಗೂ ಮನೆ, ವಾಣಿಜ್ಯ ಕಟ್ಟಡಗಳ ಕದ ನಂಬರ್, ಕಟ್ಟಡ ತೆರಿಗೆ, ಆಸ್ತಿ ಸಂಖ್ಯೆಯನ್ನು ರದ್ದುಪಡಿಸಿ ಅಕ್ರಮ ಕಟ್ಟಡಗಳ ಕಾಮಗಾರಿಗಳನ್ನು ಕೂಡಲೇ ಸ್ಥಗಿತಗೊಳಿಸಬೇಕಾಗಿ ಪ್ರತೀಕ್ ಅಂಕಾಜೆ ಇವರು ಮನವಿ ಮಾಡಿದ್ದು, ಇದರ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಉಜಿರೆ, ಕುವೆಟ್ಟು, ಮಡಂತ್ಯಾರು, ಧರ್ಮಸ್ಥಳ, ಚಾರ್ಮಾಡಿ, ನಿಡ್ಲೆ, ಕೊಕ್ಕಡ, ಬಳಂಜ, ಅಳದಂಗಡಿ, ಸುಲ್ಕೇರಿ ಮತ್ತು ನಾರಾವಿಎ ಪಂಚಾಯತುಗಳಿಗೆ ಕಳುಹಿಸಿದ ಆದೇಶದಲ್ಲಿ ಸೂಚಿಸಲಾಗಿದೆ.

Related posts

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಸಂಸದರ ನಿಧಿಯಿಂದ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya
error: Content is protected !!