July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಅಲೆಂಜಿಕಟ್ಟ ಎಂಬಲ್ಲಿ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಮಾಡಿ ಸಾಗಾಟ ಮಾಡಲು ಲಾರಿಗೆ ತುಂಬಿಸುತ್ತಿರುವ ಬಗ್ಗೆ ಮಾ.4 ರಂದು ಸಂಜೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಚರ್ಚ್ ಗುಡ್ಡೆ ನಿವಾಸಿ ನಿಜಾಮುದ್ದೀನ್(47) ಮತ್ತು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ನಿವಾಸಿ ಹನೀಫ್(44) ಎಂಬವರು KA-53-A-9796 ನಂಬರಿನ ಟಿಪ್ಪರ್ ಲಾರಿಯಲ್ಲಿ ಯಾವುದೇ ಸರಕಾರದ ಅನುಮತಿ ಇಲ್ಲದೆ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸುತ್ತಿದ್ದರು.

ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳದಿಂದ 3 ಲಕ್ಷದ 50 ರೂಪಾಯಿ ಮೌಲ್ಯದ ಒಂದು ಲಾರಿ, 6,500 ರೂಪಾಯಿ ಮೌಲ್ಯದ ಮರಳು,ಮರಳನ್ನು ಲಾರಿಗೆ ತುಂಬಿಸಲು ಉಪಯೋಗಿಸಿದ 150 ರೂಪಾಯಿ ಮೌಲ್ಯದ ಪ್ರೈಬರ್ ಬುಟ್ಟಿಗಳು 3 , 100 ರೂಪಾಯಿ ಮೌಲ್ಯದ ಹಾರೆ 1, 50 ರೂಪಾಯಿ ಮೌಲ್ಯದ ಕಬ್ಬಿಣದ ಬಕೆಟ್ 1, 2,500 ರೂಪಾಯಿ ಮೌಲ್ಯದ ಕಬ್ಬಿಣದ ಮೆಟ್ಟಿಲುಗಳನ್ನು ವಶಪಡಿಸಿಕೊಂಡಿದ್ದಾರೆ.

ಇಬ್ಬರು ಆರೋಪಿಗಳಾದ ನಿಜಾಮುದ್ದೀನ್ ಮತ್ತು ಹನೀಫ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಕುಶಾಲಪ್ಪ ನಾಯ್ಕ್ ಅವರು ಮಾ.4 ರಂದು ನೀಡಿದ ದೂರಿನ ಮೇರೆಗೆ BNS -2023 (u/s-303(2),r/w3(5)),MMDR Act 1957(u/s-4(1),4(1A),21(1)(1A),KMMCR-1994(u/s-42,43,44) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

Suddi Udaya

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ಧೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆ ಉದ್ಘಾಟನೆ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!