37.9 C
ಪುತ್ತೂರು, ಬೆಳ್ತಂಗಡಿ
March 6, 2026
ಚಿತ್ರ ವರದಿಜಿಲ್ಲಾ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಚನ್ನರಾಯಪಟ್ಟಣ, ಹಾಸನ ಇದರ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಎಸ್‌ ಎ ಶ್ರವಣಬೆಳಗೊಳ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್ಸ್ ನಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕವನ್ನು ಪುನರ್ ಸಂಘಟಿಸಲು ಸಮಾಲೋಚನಾ ಸಭೆ ಕರೆಯಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ನ್ಯಾಯವಾದಿ ಪರಿಮಳ ರಾವ್ ಕೆ ಅವರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಎಲ್ಲಾ ತಾಲೂಕು ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳನ್ನು ಪುನರ್ ನೇಮಕ ಮಾಡಿ ಕಾರ್ಯ ಪ್ರವೃತ್ತರಾಗಲು ಸಲಹೆ ಸೂಚನೆಗಳನ್ನಿತ್ತರು.

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಅಧ್ಯಕ್ಷೆ ಸಿಹಾನ ಬಿ ಎಂ, ಉಪಾಧ್ಯಕ್ಷೆ ದಾಕ್ಷಾಯಿಣಿ ಎಸ್ ಜಿ, ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಸಂಘಟಕರು ಅಶ್ವಿಜ ಶ್ರೀಧರ್, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ‌ ಅಧ್ಯಕ್ಷ ಶಿವರಾಮ ಕಾಸರಗೋಡು, ಚಿರಂತ್ ಸಚಿನ್ ಶ್ರವಣಬೆಳಗೊಳ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಅಧ್ಯಕ್ಷೆ ನ್ಯಾಯವಾದಿ ಪರಿಮಳ ರಾವ್ ಕೆ, 8123716968

Related posts

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!