September 6, 2026
ಚಿತ್ರ ವರದಿಜಿಲ್ಲಾ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಚನ್ನರಾಯಪಟ್ಟಣ, ಹಾಸನ ಇದರ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಎಸ್‌ ಎ ಶ್ರವಣಬೆಳಗೊಳ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್ಸ್ ನಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕವನ್ನು ಪುನರ್ ಸಂಘಟಿಸಲು ಸಮಾಲೋಚನಾ ಸಭೆ ಕರೆಯಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ನ್ಯಾಯವಾದಿ ಪರಿಮಳ ರಾವ್ ಕೆ ಅವರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಎಲ್ಲಾ ತಾಲೂಕು ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳನ್ನು ಪುನರ್ ನೇಮಕ ಮಾಡಿ ಕಾರ್ಯ ಪ್ರವೃತ್ತರಾಗಲು ಸಲಹೆ ಸೂಚನೆಗಳನ್ನಿತ್ತರು.

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಅಧ್ಯಕ್ಷೆ ಸಿಹಾನ ಬಿ ಎಂ, ಉಪಾಧ್ಯಕ್ಷೆ ದಾಕ್ಷಾಯಿಣಿ ಎಸ್ ಜಿ, ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಸಂಘಟಕರು ಅಶ್ವಿಜ ಶ್ರೀಧರ್, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ‌ ಅಧ್ಯಕ್ಷ ಶಿವರಾಮ ಕಾಸರಗೋಡು, ಚಿರಂತ್ ಸಚಿನ್ ಶ್ರವಣಬೆಳಗೊಳ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಅಧ್ಯಕ್ಷೆ ನ್ಯಾಯವಾದಿ ಪರಿಮಳ ರಾವ್ ಕೆ, 8123716968

Related posts

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya

ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

Suddi Udaya

ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

Suddi Udaya
error: Content is protected !!