24 C
ಪುತ್ತೂರು, ಬೆಳ್ತಂಗಡಿ
August 3, 2026
ಅಭಿನಂದನೆಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಾಧಕರು

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

ಬೆಳ್ತಂಗಡಿ: ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ-2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಪ್ರಗತಿಪರ ಸಾವಯವ ಕೃಷಿಕ ಬೆಳ್ತಂಗಡಿ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಮಾ.3ರಂದು ಬೆಂಗಳೂರು ನಲ್ಲಿ ಕಂದಾಯ ಸಚಿವ ಕೃಷ್ಣಬೈರೇ ಗೌಡರವರು ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ನ್ಯೂಸ್ 18 ಕನ್ನಡ ಸಂಪಾದಕ ಹರಿಪ್ರಸಾದ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು, ಸಿನಿಮಾ ತಾರೆಯರು, ಸಾಧಕರು ಉಪಸ್ಥಿತರಿದ್ದರು.

ಅಡಿಕೆ, ತೆಂಗು, ಕಾಳು ಮೆಣಸು, ಹಣ್ಣು ಹಂಪಲು, ಮೀನುಗಾರಿಕೆ, ಕೋಳಿಸಾಕಣೆ, ಹೈನುಗಾರಿಕೆ ಹಾಗೂ ವಿವಿಧ ರೀತಿಯ ಪ್ರಾಣಿ ಪಕ್ಷಿಗಳ ಸಾಕಣೆಯ ಜೊತೆಗೆ ಸುಸ್ಥಿರ ಮಾದರಿಯಲ್ಲಿ ಬೆಳೆಸುವ ಮಾದರಿ ಕೃಷಿಕರಾಗಿ ಸಮಗ್ರ ಕೃಷಿಯಲ್ಲಿ ಗುರುತಿಸಿಕೊಂಡಿದ್ದಾರೆ. ತಾಯಿ ಕುಸುಮ, ಪತ್ನಿ, ಮಕ್ಕಳು, ಸಹೋದರ ದಂಪತಿಗಳು ಇವರೆಲ್ಲರೂ ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿರುತ್ತಾರೆ.

Related posts

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya
error: Content is protected !!