22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವ-2026: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರಿನಲ್ಲಿ ಸಹಕಾರಿ ಭಾರತಿ ವತಿಯಿಂದ ನಡೆದ ಸಹಕಾರಿ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಗಳಿಗಾಗಿ ನಡೆದ ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವದಲ್ಲಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಸದಸ್ಯರು ಮತ್ತು ಸಿಬ್ಬಂದಿಗಳು ಭಾಗವಹಿಸಿದರು.

ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವದ 100 ಮೀಟರ್ ಓಟದಲ್ಲಿ ಅಳದಂಗಡಿ ಸಿಎ ಬ್ಯಾಂಕಿನ ಅಧ್ಯಕ್ಷರಾದ ರಾಕೇಶ್ ಹೆಗ್ಡೆ ಇವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕ್ರಿಕೆಟ್ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನವನ್ನು ಅಲಂಕರಿಸಿದ್ದಾರೆ ಹಾಗೂ ವಿವಿಧ ಕ್ರೀಡಾಕೂಟದಲ್ಲಿ ಸಂಘದ ಪದಾಧಿಕಾರಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಸಂಘವು ಪಡೆದುಕೊಂಡಿತು.

ಈ ಸಂದರ್ಭದಲ್ಲಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಉಪಾಧ್ಯಕ್ಷ ಜನಾರ್ದನ ಪೂಜಾರಿ, ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ, ದಿನೇಶ್ ಪಿ.ಕೆ, ಸಿಬ್ಬಂದಿಗಳಾದ ಸತೀಶ್ ಕೆ, ಯತೀಶ್ ಬಳಂಜ, ಪ್ರವೀಣ್ ತೋಟದಪಲ್ಕೆ, ಕಿರಣ್ ಪಿಲ್ಯ, ಸಂತೋಷ್ ಅಳದಂಗಡಿ, ದಿನೇಶ್ ಕುದ್ಯಾಡಿ, ಡಿಕಯ್ಯ ಕುಲಾಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ಅಭ್ಯಾಸ್ ಪಿಯು ಕಾಲೇಜು ಹಾಗೂ ಪ್ರಸನ್ನ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ ರಾಣಿಯ ವರ್ಷಾಚರಣೆಯ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!