22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ 2025ನೇ ಸಾಲಿನ ಗೌರವ ಪ್ರಶಸ್ತಿಗೆ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಲೋಕೇಶ್ವರಿ ವಿನಯಚಂದ್ರ ಅವರನ್ನು ಆಯ್ಕೆ ಮಾಡಿದೆ. ಅರೆಭಾಷಿಕ ಸಂಘಟನಾ ಕ್ಷೇತ್ರದ ಸಾಧನೆಗಾಗಿ ಲೋಕೇಶ್ವರಿ ವಿನಯಚಂದ್ರ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಮಾರ್ಚ್ 14ರಂದು ಮಂಗಳೂರಿನ ಉರ್ವ ಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿ ಪ್ರದಾನ ನಡೆಯಲಿದೆ.

ಪ್ರಶಸ್ತಿ 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ ಎಂದು ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ. ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದ ಸಾಧನೆಗಾಗಿ ಅನಂತರಾಜ ಗೌಡ ಪುತ್ತೂರು ಮತ್ತು ಅರೆಭಾಷೆ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕಟ್ರತನ ಲಲಿತ ಅಯ್ಯಣ್ಣ ಮಡಿಕೇರಿ ಅವರಿಗೆ ಪ್ರಶಸ್ತಿ ಘೋಷಿಸಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಕಾಡೆಮಿ ಪ್ರಕಟಿತ ಪುಸ್ತಕಗಳ ಬಿಡುಗಡೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲಾವಿದರಿಗೆ ವಾದ್ಯ ಪರಿಕರಗಳ ವಿತರಣೆ ಹಾಗೂ ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ಎಸ್.ಐ.ಟಿ ಮುಂದೆ ಹಾಜರಾದ ಯೂಟ್ಯೂಬರ್ ಸಂತೋಷ್ ಕಡಬ ಹಾಗೂ ಜಯಂತ್. ಟಿ ಪತ್ನಿ, ಮಗ, ಮಗಳು

Suddi Udaya

ಬೆಳ್ತಂಗಡಿ: ಹೆದ್ದಾರಿಯ ಅಗಲೀಕರಣ ಪರಿಹಾರಧನ ಪಡೆದಮನೆ, ಕಟ್ಟಡಗಳ ತೆರಿಗೆ ರದ್ದು ಪಡಿಸಲು ಸೂಚನೆ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya
error: Content is protected !!