22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹೆದ್ದಾರಿಯ ಅಗಲೀಕರಣ ಪರಿಹಾರಧನ ಪಡೆದಮನೆ, ಕಟ್ಟಡಗಳ ತೆರಿಗೆ ರದ್ದು ಪಡಿಸಲು ಸೂಚನೆ

ಬೆಳ್ತಂಗಡಿ: ರಾಷ್ಟ್ರೀಯ, ರಾಜ್ಯ ಹೆದ್ದಾರಿಯ ಅಗಲೀಕರಣದ ಸಂದರ್ಭದಲ್ಲಿ ರಸ್ತೆ ಅಗಲೀಕರಣಕ್ಕಾಗಿ ಪರಿಹಾರಧನ ಪಡೆದುಕೊಂಡ ಮನೆ,ಕಟ್ಟಡಗಳ ಮಾಲೀಕರ, ಅನುಭೋಗದಾರರ ಮನೆ,ಕಟ್ಟಡಗಳ ಆಸ್ತಿ ಹಾಗೂ ಆಸ್ತಿಗಳ ಕದ ನಂಬ್ರ, ಕಟ್ಟಡ ತೆರಿಗೆ ಹಾಗೂ ಆಸ್ತಿ ಸಂಖ್ಯೆಯನ್ನು ರದ್ದುಪಡಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯತೆಯಿಂದ ನಿಯಮಾವಳಿಯಂತೆ ಕ್ರಮ ವಹಿಸಲು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಪಂಚಾಯತುಗಳ ಅಭಿವೃದ್ಧಿಗಳಿಗೆ ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳು ಆದೇಶ ಮಾಡಿದ್ದಾರೆ.

ಪೂಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಅಗಲೀಕರಣ ಕಾಮಗಾರಿ ಕೆಲಸಗಳು ನಡೆಯುತ್ತಿದ್ದು, ಸದರಿ ಕಾಮಗಾರಿ ಮಾಡಲು ವಾಸ್ತವ್ಯ ಮತ್ತು ವಾಣಿಜ್ಯ ಸೇರಿದಂತೆ ಹಲವು ಕಟ್ಟಡಗಳನ್ನು ತೆರವು ಮಾಡಲು ಪರಿಹಾರ ಧನ ಪಡೆದುಕೊಂಡ ಬಹುತೇಕ ವಾಣಿಜ್ಯ ಕಟ್ಟಡ, ಮನೆಗಳ ಮಾಲೀಕರು ಕಾನೂನು ಬಾಹಿರವಾಗಿ ಸ್ಥಳೀಯ ಗ್ರಾಮ ಪಂಚಾಯತಿನಿಂದ ಮನೆ, ಕಟ್ಟಡ ರಚನೆ, ದುರಸ್ಥಿ, ಸೇರ್ಪಡೆ, ನವೀಕರಣ, ವಿಸ್ತರಣೆ ಮಾಡುವ ಬಗ್ಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಂಡು ಕಾಮಗಾರಿ ಕೆಲಸ ಮಾಡುತ್ತಿದ್ದಾರೆ. ಆದರೆ ಕಾನೂನು ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದಿಂದ ಪರಿಹಾರದ ಹಣ ಪಡೆದುಕೊಂಡ ಮಾಲೀಕರಿಗೆ ಅನುಮೋದನೆ ನೀಡಬಾರದು ಹಾಗೂ ಮನೆ, ವಾಣಿಜ್ಯ ಕಟ್ಟಡಗಳ ಕದ ನಂಬರ್, ಕಟ್ಟಡ ತೆರಿಗೆ, ಆಸ್ತಿ ಸಂಖ್ಯೆಯನ್ನು ರದ್ದುಪಡಿಸಿ ಅಕ್ರಮ ಕಟ್ಟಡಗಳ ಕಾಮಗಾರಿಗಳನ್ನು ಕೂಡಲೇ ಸ್ಥಗಿತಗೊಳಿಸಬೇಕಾಗಿ ಪ್ರತೀಕ್ ಅಂಕಾಜೆ ಇವರು ಮನವಿ ಮಾಡಿದ್ದು, ಇದರ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಉಜಿರೆ, ಕುವೆಟ್ಟು, ಮಡಂತ್ಯಾರು, ಧರ್ಮಸ್ಥಳ, ಚಾರ್ಮಾಡಿ, ನಿಡ್ಲೆ, ಕೊಕ್ಕಡ, ಬಳಂಜ, ಅಳದಂಗಡಿ, ಸುಲ್ಕೇರಿ ಮತ್ತು ನಾರಾವಿಎ ಪಂಚಾಯತುಗಳಿಗೆ ಕಳುಹಿಸಿದ ಆದೇಶದಲ್ಲಿ ಸೂಚಿಸಲಾಗಿದೆ.

Related posts

ನಾಲ್ಕೂರು: ಸಿದ್ದಪ್ಪ ಪೂಜಾರಿ ನಿಧನ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ನಲ್ಲಿ 79ನೇ ಸ್ವಾತಂತ್ರ‍್ಯ ದಿನಾಚರಣೆ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya
error: Content is protected !!